Webdunia - Bharat's app for daily news and videos

Install App

ಸೆಲಿಬ್ರಿಟಿಗಳು ಹಾಗೆ ಮಾಡಬಾರದು: ಧೋನಿಗೆ ನ್ಯಾಯಾಧೀಶರ ತರಾಟೆ

Webdunia
ಸೋಮವಾರ, 10 ಆಗಸ್ಟ್ 2015 (18:25 IST)
ಮಹೇಂದ್ರ ಸಿಂಗ್ ಧೋನಿ ಅವರನ್ನು ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಪ್ರಕರಣ ನಡೆದಿದೆ. ವಿಷ್ಣು ವೇಷದಲ್ಲಿ ಕಾಣಿಸಿಕೊಂಡಿದ್ದ ಧೋನಿ ರೀಬಾಕ್ ಶೂ ಹಿಡಿದಿದ್ದ  ಭಾವಚಿತ್ರ ಪ್ರಕಟಿಸಲಾಗಿತ್ತು.

ಈ ಕುರಿತು ವಕೀಲ ಧರ್ಮಪಾಲ್ ಮತ್ತು ಸಾಮಾಜಿಕ ಕಾರ್ಯಕರ್ತ ಜಯಕುಮಾರ ಹಿರೇಮಠ್ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿತು.   ಜಾಹೀರಾತಿಗೆ ಧೋನಿ ಹಣ ಪಡೆದಿಲ್ಲ ಎಂದು ದೋನಿ ವಕೀಲರು ಹೇಳಿದ್ದರು.  ಹಾಗಿದ್ದರೆ ಪ್ರಮಾಣಪತ್ರ ಸಲ್ಲಿಸಿ ಎಂದು ನ್ಯಾಯಾಧೀಶರು ಕೇಳಿದರು. 
 
ಈ ಸೆಲೆಬ್ರಿಟಿಗಳ ಹಿಂದೆ ಜನರೂ ಬೀಳುತ್ತಾರೆ. ಇವರೂ ಸುಲಭವಾಗಿ ಹಣ ಗಳಿಸಲು ಇಂತಹ ಕೆಲಸ ಮಾಡುತ್ತಾರೆ. ಆದರೆ ಜನರು ಮೂಕ ಪ್ರೇಕ್ಷಕರ ಹಾಗೆ ಸೆಲಿಬ್ರಿಟಿಗಳನ್ನು ಅನುಸರಿವುದರಿಂದ ಅವರು ಹಾಗೆ ಮಾಡುವುದು ಸರಿಯಲ್ಲ ಎಂದು  ಧೋನಿಗೆ ನ್ಯಾಯಮೂರ್ತಿ ವೇಣುಗೋಪಾಲ ಗೌಡ ತರಾಟೆಗೆ ತೆಗೆದುಕೊಂಡರು.  
 ಬ್ಯುಸಿನೆಸ್ ಟುಡೇ ಪತ್ರಿಕೆಯಲ್ಲಿ ಈ ಭಾವಚಿತ್ರ ಪ್ರಕಟವಾಗಿತ್ತು. ಧೋನಿಗೆ  ಹೈಕೋರ್ಟ್ ಹಾಜರಾತಿಯಿಂದ ವಿನಾಯಿತಿ ನೀಡಿದ್ದರಿಂದ ಅವರ ವಕೀಲರು ಕೋರ್ಟ್‌ಗೆ ಹಾಜರಾಗಿದ್ದರು. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments