Webdunia - Bharat's app for daily news and videos

Install App

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತಕ್ಕೆ ಮಾತ್ರ ಅನುಕೂಲವಾಗ್ತಿದೆ: ಆಸ್ಟ್ರೇಲಿಯಾ ಬಳಿಕ ಇಂಗ್ಲೆಂಡ್ ತಗಾದೆ

Krishnaveni K
ಬುಧವಾರ, 26 ಫೆಬ್ರವರಿ 2025 (10:29 IST)
ದುಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾಕ್ಕೆ ಮಾತ್ರ ಅನುಕೂಲವಾಗ್ತಿದೆ ಎಂದು ಆಸ್ಟ್ರೇಲಿಯಾ ಬಳಿಕ ಈಗ ಇಂಗ್ಲೆಂಡ್ ನಾಯಕ ತಗಾದೆ ತೆಗೆದಿದ್ದಾರೆ.

ಪಾಕಿಸ್ತಾನದ ಆತಿಥ್ಯದಲ್ಲಿ ಟೂರ್ನಮೆಂಟ್ ನಡೆಯುತ್ತಿದೆ. ಆದರೆ ಭಾರತ ಮಾತ್ರ ತನ್ನ ರಾಜಕೀಯ ಕಾರಣಗಳಿಂದ ಪಾಕಿಸ್ತಾನಕ್ಕೆ ತೆರಳಲು ಒಪ್ಪಿಲ್ಲ. ಉಳಿದೆಲ್ಲಾ ತಂಡಗಳು ಪಾಕಿಸ್ತಾನದ ಮೈದಾನಗಳಲ್ಲಿ ಪಂದ್ಯವಾಡಿದೆ. ಆದರೆ ಭಾರತ ಮಾತ್ರ ಒಂದೇ ಮೈದಾನದಲ್ಲಿ ಅಂದರೆ ದುಬೈನಲ್ಲೇ ಪಂದ್ಯವಾಡುತ್ತಿದೆ.

ಇದೀಗ ಭಾರತ ಸೆಮಿಫೈನಲ್ ಗೇರಿದ ಬೆನ್ನಲ್ಲೇ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಾಯಕರು ತಗಾದೆ ತೆಗೆದಿದ್ದಾರೆ. ಒಂದೇ ಮೈದಾನದಲ್ಲಿ ಆಡುತ್ತಿರುವುದರಿಂದ ಭಾರತಕ್ಕೆ ಮಾತ್ರ ಹೆಚ್ಚಿನ ಲಾಭವಾಗುತ್ತಿದೆ ಎಂದು ಮೊದಲು ಆಸೀಸ್ ನಾಯಕ ಪ್ಯಾಟ್ ಕುಮಿನ್ಸ್ ಆಕ್ಷೇಪ ವ್ಯಕ್ತಪಡಿಸಿದ್ದರು.

ಇದೀಗ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಕೂಡಾ ಅದೇ ವಿಚಾರ ಹೇಳಿದ್ದಾರೆ. ಇದೊಂದು ವಿಶೇಷ ಟೂರ್ನಮೆಂಟ್. ಇದುವರೆಗೆ ಕಾಣದಂತಹ ಟೂರ್ನಿ. ಯಾಕೆಂದರೆ ಇಲ್ಲಿ ಎಲ್ಲಾ ತಂಡಗಳೂ ಬೇರೆ ಬೇರೆ ಸ್ಥಳಗಳಲ್ಲಿ ಆಡುತ್ತಿದೆ, ಒಂದು ತಂಡವನ್ನು ಬಿಟ್ಟು ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments