Webdunia - Bharat's app for daily news and videos

Install App

Champions Trophy: ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಗೆಲುವಿಗೆ ಶುಬ್ಮನ್ ಗಿಲ್ ಶತಕವೇ ಆಧಾರ

Krishnaveni K
ಗುರುವಾರ, 20 ಫೆಬ್ರವರಿ 2025 (21:52 IST)
Photo Credit: X
ದುಬೈ: ಚಾಂಪಿಯನ್ಸ್ ಟ್ರೋಫಿ 2025 ರ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಶುಬ್ಮನ್ ಗಿಲ್ ಶತಕದ ನೆರವಿನಿಂದ ಟೀಂ ಇಂಡಿಯಾ ಗೆಲುವು ಕಾಣುವಂತಾಯಿತು. ಮೊದಲ ಪಂದ್ಯವನ್ನು 6 ವಿಕೆಟ್ ಗಳಿಂದ ಗೆದ್ದ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಶುಭಾರಂಭ ಮಾಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 49.4 ಓವರ್ ಗಳಲ್ಲಿ 228 ರನ್ ಗಳಿಗೆ ಆಲೌಟ್ ಆಯಿತು. ಬಾಂಗ್ಲಾ ಪರ ತೌಹೀದ್ ಹೃದಯ್ 100 ರನ್ ಗಳಿಸಿದರು. ಭಾರತದ ಪರ ಮೊಹಮ್ಮದ್ ಶಮಿ 5 ವಿಕೆಟ್ ಗಳ ಗೊಂಚಲು ಪಡೆಯುವ ಮೂಲಕ ಭರ್ಜರಿ ಬೌಲಿಂಗ್ ಮಾಡಿದರು. ಅವರಿಗೆ ಸಾಥ್ ನೀಡಿದ ಹರ್ಷಿತ್ ರಾಣಾ 3 ವಿಕೆಟ್ ಪಡೆದರೆ ಅಕ್ಸರ್ ಪಟೇಲ್ 2 ವಿಕೆಟ್ ಕಬಳಿಸಿದರು.

ಈ ಮೊತ್ತ ಬೆನ್ನತ್ತಿದ ಭಾರತಕ್ಕೆ ರೋಹಿತ್ ಶರ್ಮಾ-ಶುಬ್ಮನ್ ಗಿಲ್ ಜೋಡಿ ಉತ್ತಮ ಆರಂಭ ನೀಡಿತು. ಆದರೆ ಅರ್ಧಶತಕದ ಜೊತೆಯಾಟವಾಡಿದ ಬಳಿಕ ಎಂದಿನಂತೆ 40 ಪ್ಲಸ್ ಸ್ಕೋರ್ ಗಳಿಸಿ ರೋಹಿತ್ ಔಟಾದರು. ಬಳಿಕ ಬಂದ ವಿರಾಟ್ ಕೂಡಾ ಹೆಚ್ಚು ಹೊತ್ತು ನಿಲ್ಲಲಿಲ್ಲ. ಅವರ ಕೊಡುಗೆ ಕೇವಲ 22 ರನ್. ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಮಿಂಚಿದ್ದ ಶ್ರೇಯಸ್ ಅಯ್ಯರ್ 15 ರನ್ ಗಳಿಸಿ ಔಟಾದಾಗ ಭಾರತ ಸಂಕಷ್ಟಕ್ಕೀಡಾಯಿತು.

ಆದರೆ ಇನ್ನೊಂದೆಡೆ ಏಕಾಂಗಿಯಾಗಿ ಹೋರಾಟ ನಡೆಸಿದ ಶುಬ್ಮನ್ ಗಿಲ್ 129 ಎಸೆತಗಳನ್ನು ಎದುರಿಸಿ ಅಜೇಯರಾಗಿ 101 ರನ್ ಗಳಿಸಿದರು. ಇದು ಏಕದಿನ ಪಂದ್ಯಗಳಲ್ಲಿ ಅವರ 8 ನೇ ಶತಕವಾಗಿತ್ತು. ವಿಶೇಷವೆಂದರೆ ಕಳೆದ ನಾಲ್ಕು ಏಕದಿನ ಪಂದ್ಯಗಳಲ್ಲಿ ಎರಡು ಅರ್ಧಶತಕ, ಎರಡು ಶತಕ ಗಳಿಸಿ ಭರ್ಜರಿ ಫಾರ್ಮ್ ಪ್ರದರ್ಶಿಸಿದರು. ಕೆಎಲ್ ರಾಹುಲ್ ಕೂಡಾ ಅವರಿಗೆ ಸಾಥ್ ನೀಡಿದ್ದು 47 ಎಸೆತ ಎದುರಿಸಿ ಅಜೇಯ 41 ರನ್ ಗಳಿಸಿದರು. ಅಂತಿಮವಾಗಿ ಭಾರತ 46.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವು ಕಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

DCvsGT Match:ಯಾರ್ಕರ್‌ನೊಂದಿಗೆ ಕೆಎಲ್ ರಾಹುಲ್‌ ವಿಕೆಟ್ ಕಿತ್ತ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

IPL 2025 RCB vs PBKS: ಬೆಂಗಳೂರು ನಿಮ್ಗೆ ಬಿಟ್ಟುಕೊಟ್ವಿ, ಪಂಜಾಬ್ ನಲ್ಲಿ ಬಿಡೋ ಮಾತೇ ಇಲ್ಲ

Rahul Dravid: ಸಂಜು ಸ್ಯಾಮ್ಸನ್ ಜೊತೆ ಕಿರಿಕ್ ಇದ್ಯಾ: ರಾಹುಲ್ ದ್ರಾವಿಡ್ ಹೇಳಿದ್ದು ಕೇಳಿದ್ರೆ ಶಾಕ್ ಆಗ್ತೀರಿ

RCB vs PBKS:ಆರ್‌ಸಿಬಿ ಆಟಗಾರರ ಬ್ಯಾಟಿಂಗ್‌ ಬಗ್ಗೆ ವೀರೇಂದ್ರ ಸೆಹ್ವಾಗ್ ಟೀಕೆ

ಮುಂದಿನ ಸುದ್ದಿ
Show comments