Webdunia - Bharat's app for daily news and videos

Install App

ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾದಲ್ಲಿ ಕೊಂಚ ಬದಲಾವಣೆ

Krishnaveni K
ಮಂಗಳವಾರ, 4 ಫೆಬ್ರವರಿ 2025 (11:34 IST)
ಮುಂಬೈ: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಆದರೆ ಇದೀಗ ತಂಡದಲ್ಲಿ ಒಂದು ಬದಲಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇತ್ತೀಚೆಗೆ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಯುವ ಸ್ಪಿನ್ನರ್ ವರುಣ್ ಚಕ್ರವರ್ತಿ ಅದ್ಭುತ ಪ್ರದರ್ಶನ ನೀಡಿದ್ದರು. ಆದರೆ ಅವರು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಅವರು ಆಯ್ಕೆಯಾಗಿಲ್ಲ.

ಆದರೆ ಈಗ ಟಿ20 ಸರಣಿಯ ಪ್ರದರ್ಶನ ಗಮನಿಸಿ ತಂಡದಲ್ಲಿ ಅವರನ್ನು ಸೇರಿಸಿಕೊಳ್ಳಬಹುದು ಎಂದು ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೇಳಿದ್ದಾರೆ. ಆದರೆ ಅವರಿಗಾಗಿ ಸ್ಥಾನ ಬಿಟ್ಟುಕೊಡಲು ಯಾರು ತಯಾರಾಗಬಹುದು ಎಂದೂ ಪ್ರಶ್ನೆ ಮಾಡಿದ್ದಾರೆ.

ಸದ್ಯಕ್ಕೆ ತಾತ್ಕಾಲಿಕ ತಂಡವನ್ನಷ್ಟೇ ಪ್ರಕಟಿಸಲಾಗಿದೆ. ಆದರೆ ವರುಣ್ ಅದ್ಭುತ ಫಾರ್ಮ್ ನಲ್ಲಿದ್ದು ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು ಎಂದು ನನಗೆ ಅನಿಸುತ್ತಿದೆ ಎಂದು ಅಶ್ವಿನ್ ಹೇಳಿದ್ದಾರೆ. ಆದರೆ ಸದ್ಯಕ್ಕೆ ಟೀಂ ಇಂಡಿಯಾ ಸ್ಥಾನ ಬಿಟ್ಟುಕೊಡುವಂತಹ ಆಟಗಾರರು ಯಾರೂ ಇಲ್ಲ. ಹೀಗಾಗಿ ವರುಣ್ ಗೆ ಹೇಗೆ ಸ್ಥಾನ ಮಾಡಿಕೊಡಬಹುದು ಎಂಬುದು ಕುತೂಹಲದ ವಿಚಾರವಾಗಿದೆ ಎಂದು ಅಶ್ವಿನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments