Select Your Language

Notifications

webdunia
webdunia
webdunia
webdunia

ಧೋನಿ-ಕೊಹ್ಲಿ ನಡುವಿನ ಕಾದಾಟ ನೋಡಲು ಬಯಸಿದ್ದ ಅಭಿಮಾನಿಗಳಿಗೆ ಕಾದಿದೆ ನಿರಾಸೆ!

ಧೋನಿ-ಕೊಹ್ಲಿ ನಡುವಿನ ಕಾದಾಟ ನೋಡಲು ಬಯಸಿದ್ದ ಅಭಿಮಾನಿಗಳಿಗೆ ಕಾದಿದೆ ನಿರಾಸೆ!
ಮುಂಬೈ , ಮಂಗಳವಾರ, 10 ಏಪ್ರಿಲ್ 2018 (08:43 IST)
ಮುಂಬೈ: ಪ್ರಸಕ್ತ ನಡೆಯುತ್ತಿರುವ ಐಪಿಎಲ್ ಪಂದ್ಯದ ಮೇಲೆ ತಮಿಳುನಾಡಿನಲ್ಲಿ ನಡೆಯುತ್ತಿರುವ ಕಾವೇರಿ ಹೋರಾಟದ ಬಿಸಿ ತಾಗಿದೆ. ಇದರಿಂದಾಗಿ ಬೆಂಗಳೂರು ಮತ್ತು ಚೆನ್ನೈ ನಡುವೆ ನಡೆಯಲಿರುವ ಕೆಲವು ಪಂದ್ಯಗಳಲ್ಲಿ ಬದಲಾವಣೆಯಾಗಲಿದೆ.

ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆಯಾಗಬೇಕೆಂದು ಒತ್ತಾಯಿಸಿ ತಮಿಳುನಾಡಿನಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಸ್ವತಃ ಸೂಪರ್ ಸ್ಟಾರ್ ರಜನೀಕಾಂತ್ ಐಪಿಎಲ್ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಆಡಬೇಕೆಂದು ಆಗ್ರಹಿಸಿದ್ದರು.

ಇದೀಗ ಬಿಸಿಸಿಐ ಕೂಡಾ ಇದರ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಬೆಂಗಳೂರು ರಾಯಲ್ ಚಾಲೆಂಜರ್ಸ್ ನಡುವಿನ ಕೆಲವು ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ನಡೆಸಲು ಉದ್ದೇಶಿಸಿದೆ.

ಚೆನ್ನೈ ಅಥವಾ ಬೆಂಗಳೂರಿನ ಮೈದಾನದಲ್ಲಿ ನಡೆದರೆ ಪ್ರತಿಭಟನೆಯ ಕಾವು ಪಂದ್ಯದ ಮೇಲಾಗಬಹುದು ಎಂಬ ಉದ್ದೇಶದಿಂದ ಕೇರಳದ ಮೈದಾನದಲ್ಲಿ ಪಂದ್ಯ ನಡೆಸುವ ಬಗ್ಗೆ ಐಪಿಎಲ್ ಆಡಳಿತ ಮಂಡಳಿ ಚಿಂತನೆ ನಡೆಸಿದೆ. ಇದರಿಂದಾಗಿ ಕೊಹ್ಲಿ-ಧೋನಿ ನಡುವಿನ ಕಾದಾಟವನ್ನು ತವರಿನಲ್ಲಿ ನೋಡಲು ಬಯಸುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ಸೋಲಿನ ಬಳಿಕ ವಿರಾಟ್ ಕೊಹ್ಲಿಗೆ ಆರ್ ಸಿಬಿ ಅಭಿಮಾನಿಗಳಿಂದ ಛೀಮಾರಿ ಸಿಕ್ಕಿತು!