Webdunia - Bharat's app for daily news and videos

Install App

ಧೋನಿ-ಕೊಹ್ಲಿ ನಡುವಿನ ಕಾದಾಟ ನೋಡಲು ಬಯಸಿದ್ದ ಅಭಿಮಾನಿಗಳಿಗೆ ಕಾದಿದೆ ನಿರಾಸೆ!

Webdunia
ಮಂಗಳವಾರ, 10 ಏಪ್ರಿಲ್ 2018 (08:43 IST)
ಮುಂಬೈ: ಪ್ರಸಕ್ತ ನಡೆಯುತ್ತಿರುವ ಐಪಿಎಲ್ ಪಂದ್ಯದ ಮೇಲೆ ತಮಿಳುನಾಡಿನಲ್ಲಿ ನಡೆಯುತ್ತಿರುವ ಕಾವೇರಿ ಹೋರಾಟದ ಬಿಸಿ ತಾಗಿದೆ. ಇದರಿಂದಾಗಿ ಬೆಂಗಳೂರು ಮತ್ತು ಚೆನ್ನೈ ನಡುವೆ ನಡೆಯಲಿರುವ ಕೆಲವು ಪಂದ್ಯಗಳಲ್ಲಿ ಬದಲಾವಣೆಯಾಗಲಿದೆ.

ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆಯಾಗಬೇಕೆಂದು ಒತ್ತಾಯಿಸಿ ತಮಿಳುನಾಡಿನಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ಸ್ವತಃ ಸೂಪರ್ ಸ್ಟಾರ್ ರಜನೀಕಾಂತ್ ಐಪಿಎಲ್ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಆಡಬೇಕೆಂದು ಆಗ್ರಹಿಸಿದ್ದರು.

ಇದೀಗ ಬಿಸಿಸಿಐ ಕೂಡಾ ಇದರ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಬೆಂಗಳೂರು ರಾಯಲ್ ಚಾಲೆಂಜರ್ಸ್ ನಡುವಿನ ಕೆಲವು ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ನಡೆಸಲು ಉದ್ದೇಶಿಸಿದೆ.

ಚೆನ್ನೈ ಅಥವಾ ಬೆಂಗಳೂರಿನ ಮೈದಾನದಲ್ಲಿ ನಡೆದರೆ ಪ್ರತಿಭಟನೆಯ ಕಾವು ಪಂದ್ಯದ ಮೇಲಾಗಬಹುದು ಎಂಬ ಉದ್ದೇಶದಿಂದ ಕೇರಳದ ಮೈದಾನದಲ್ಲಿ ಪಂದ್ಯ ನಡೆಸುವ ಬಗ್ಗೆ ಐಪಿಎಲ್ ಆಡಳಿತ ಮಂಡಳಿ ಚಿಂತನೆ ನಡೆಸಿದೆ. ಇದರಿಂದಾಗಿ ಕೊಹ್ಲಿ-ಧೋನಿ ನಡುವಿನ ಕಾದಾಟವನ್ನು ತವರಿನಲ್ಲಿ ನೋಡಲು ಬಯಸುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments