ಪೂಜಾರಗೇಕೆ ಮಣೆ? ವಿಹಾರಿ, ಮಯಾಂಕ್ ಗೇಕೆ ಅವಗಣನೆ?

Webdunia
ಗುರುವಾರ, 26 ಆಗಸ್ಟ್ 2021 (09:00 IST)
ಲೀಡ್ಸ್: ಇತ್ತೀಚೆಗೆ ಟೀಂ ಇಂಡಿಯಾದಲ್ಲಿ ಪೈಪೋಟಿ ಹೇಗೆಂದರೆ ಒಂದೇ ಒಂದು ವೈಫಲ್ಯ ಸಾಕು, ಮುಂದಿನ ಪಂದ್ಯದಿಂದ ಕೊಕ್ ಸಿಗುತ್ತದೆ. ಆದರೆ ಚೇತೇಶ್ವರ ಪೂಜಾರ ವಿಚಾರದಲ್ಲಿ ಮಾತ್ರ ಇದು ತದ್ವಿರುದ್ಧವಾಗಿದೆ.


ಪೂಜಾರ ಬ್ಯಾಟ್ ನಿಂದ ರನ್ ಹರಿದುಬಂದಿದ್ದು, ಅಭಿಮಾನಿಗಳಿಗೆ ನೆನಪೇ ಇಲ್ಲ. ಟೆಸ್ಟ್ ಸ್ಪೆಷಲಿಸ್ಟ್ ಎನ್ನುವ ಕಾರಣಕ್ಕೆ ಪೂಜಾರಗೆ ಟೆಸ್ಟ್ ತಂಡದಲ್ಲಿ ಖಾಯಂ ಅವಕಾಶವಿದೆ. ಆದರೆ ತಂಡದಲ್ಲಿ ಅವಕಾಶ ಪಡೆಯಲು ಪ್ರತಿಭಾವಂತರ ಸಾಲು ಇರುವಾಗ ಪದೇ ಪದೇ ವಿಫಲವಾಗುತ್ತಿರುವ ಆಟಗಾರನಿಗೇ ಮತ್ತೆ ಅವಕಾಶ ನೀಡುವ ಅಗತ್ಯವಿದೆಯೇ?

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ನಾಯಕ ಕೊಹ್ಲಿ ನಾವು ಭವಿಷ್ಯದ ದೃಷ್ಟಿಯಿಂದ ಹೊಸ ಆಟಗಾರರಿಗೆ ಅವಕಾಶ ನೀಡುವ ಸಾಧ‍್ಯತೆಯಿದೆ ಎಂದಿದ್ದರು. ಆದರೆ ಅದನ್ನು ಅವರು ಇದುವರೆಗೆ ಕಾರ್ಯರೂಪಕ್ಕೆ ತಂದಿಲ್ಲ. ಹಾಗಿದ್ದರೆ ಕೊಹ್ಲಿ ತಮ್ಮ ಮಾತನ್ನೇ ಮರೆತುಬಿಟ್ಟರೇ? ಸದ್ಯದ ತಂಡದಲ್ಲೇ ಸೂರ್ಯಕುಮಾರ್ ಯಾದವ್, ಮಯಾಂಕ್ ಅಗರ್ವಾಲ್, ಹನುಮ ವಿಹಾರಿ ಅಂತಹ ಪ್ರತಿಭಾವಂತರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಹಾಗಿರುವಾಗ ಒಂದೇ ಒಂದು ಪಂದ್ಯದಲ್ಲಿ ಅವರಿಗೆ ಅವಕಾಶ ಕೊಡಲು ಕೊಹ್ಲಿಗೆ ಅಡ್ಡಿಯಾಗುತ್ತಿರುವುದಾದರೂ ಏನು? ಭಾರತ ಭವಿಷ್ಯದ ದೃಷ್ಟಿಯಿಂದ ಅದೇ ಆಟಗಾರರಿಗೆ ಅಂಟಿಕೊಳ್ಳುವ ಬದಲು ಹೊಸ ಆಟಗಾರರಿಗೆ ಅವಕಾಶ ನೀಡದೇ ಒಂದು ಉತ್ತಮ ಟೆಸ್ಟ್ ತಂಡವಾಗದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮುಂದಿನ ಸುದ್ದಿ
Show comments