Select Your Language

Notifications

webdunia
webdunia
webdunia
webdunia

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

RCB

Krishnaveni K

ಬೆಂಗಳೂರು , ಗುರುವಾರ, 5 ಜೂನ್ 2025 (09:57 IST)
ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಮೈದಾನದಲ್ಲಿ ನಡೆದಿದ್ದ ಕಾಲ್ತುಳಿತದ ನೋವಿನಲ್ಲೂ ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳುವವರಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ. ನಮ್ಮಲ್ಲಿ ಹೀಗಾಗಿರಲಿಲ್ಲ ಎಂದು ಮುಂಬೈ ಫ್ಯಾನ್ಸ್ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಬೆಂಗಳೂರಿಗೆ ತಿವಿದಿದ್ದಾರೆ.

ಈ ಮೊದಲು ಟಿ20 ವಿಶ್ವಕಪ್ ಗೆದ್ದ ಬಳಿಕ ಟೀಂ ಇಂಡಿಯಾ ಆಟಗಾರರು ಮುಂಬೈನಲ್ಲಿ ತೆರೆದ ಬಸ್ ನಲ್ಲಿ ಮೆರವಣಿಗೆ ಮಾಡಿದ್ದರು. ಈ ವೇಳೆ ಲಕ್ಷಾಂತರ ಜನ ರಸ್ತೆಯಲ್ಲಿ ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಸೇರಿದ್ದರು.

ಆದರೆ ಆಗ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿತ್ತು. ಹೀಗಾಗಿ ಯಾವುದೇ ದುರಂತ ಸಂಭವಿಸಿರಲಿಲ್ಲ. ಯಾಕೆಂದರೆ ಅಂದು ಆಟಗಾರರ ಮೆರವಣಿಗೆ ಬಗ್ಗೆ ಮುಂಬೈ ಪೊಲೀಸರಿಗೆ ನಾಲ್ಕು ದಿನಗಳ ಮೊದಲೇ ಮಾಹಿತಿಯಿತ್ತು. ಹೀಗಾಗಿ ಪೊಲೀಸರಿಗೂ ತಯಾರಿ ನಡೆಸಲು ಸಾಕಷ್ಟು ಅವಕಾಶ ಸಿಕ್ಕಿತ್ತು. ಇಲ್ಲೂ ತಯಾರಿ ನಡೆಸಲು ಅವಕಾಶ ನೀಡಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ ಈಗ ಚಿನ್ನಸ್ವಾಮಿ ಮೈದಾನದಲ್ಲಿ ವ್ಯವಸ್ಥೆ ಮಾಡಲು ಸಮಯದ ಕೊರತೆಯಿಂದಲೇ ಈ ದುರಂತ ಸಂಭವಿಸಿದೆ.

ಹೀಗಾಗಿ ಕಮುಂಬೈನ ಅಂದಿನ ಫೋಟೋ ಮತ್ತು ಬೆಂಗಳೂರಿನ ಇಂದಿನ ದುರಂತದ ಫೋಟೋವನ್ನು ಪ್ರಕಟಿಸಿ ನಮ್ಮಲ್ಲಿ ಇಂತಹ ದುರಂತವಾಗಿರಲಿಲ್ಲ ಎಂದಿದ್ದಾರೆ. ಇಂತಹ ನೋವಿನ ಸಂದರ್ಭದಲ್ಲಿಯೂ ಈ ರೀತಿ ಟ್ರೋಲ್ ಮಾಡುತ್ತಿರುವುದು ವಿಪರ್ಯಾಸ.

Share this Story:

Follow Webdunia kannada

ಮುಂದಿನ ಸುದ್ದಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ