Webdunia - Bharat's app for daily news and videos

Install App

ರವಿಶಾಸ್ತ್ರಿ, ದ್ರಾವಿಡ್ ಮತ್ತು ಜಹೀರ್ ಜೊತೆಗಿನ ಒಪ್ಪಂದಕ್ಕೆ ತಡೆ

Webdunia
ಶುಕ್ರವಾರ, 14 ಜುಲೈ 2017 (08:24 IST)
ಭಾರತೀಯ ಕ್ರಿಕೆಟ್`ನ ಕೋಚ್ ಆಯ್ಕೆಯ ಡ್ರಾಮಾ ಸದ್ಯಕ್ಕೆ ಮುಗಿಯುವ ಹಾಗೆ ಕಾಣುತ್ತಿಲ್ಲ. ಗಂಗೂಲಿ, ಸಚಿನ್, ಲಕ್ಷ್ಮಣ್ ನೇತೃತ್ವದ ಸಲಹಾ ಸಮಿತಿ ರವಿಶಾಸ್ತ್ರಿ, ದ್ರಾವಿಡ್ ಮತ್ತು ಜಹೀರ್ ಖಾನ್ ಅವರನ್ನ ಕ್ರಮವಾಗಿ ಹೆಡ್ ಕೋಚ್, ಬ್ಯಾಟಿಂಗ್ ಮತ್ತು ಬೌಲಿಂಗ್ ಸಲಹೆಗಾರರಾಗಿ ನೇಮಿಸಲಾಗಿತ್ತು. ಆದರೆ, ಅವರಿಗೆ ನೀಡಬೇಕಾದ ಅಧಿಕೃತ ಒಪ್ಪಂದ ಈಗ ತಡೆಹಿಡಿಯಲಾಗಿದ್ದು, ಸುಪ್ರೀಂಕೋರ್ಟ್ ನೇಮಿಸಿರುವ ಆಡಳಿತ ಮಂಡಳಿ ಗ್ರೀನ್ ಸಿಗ್ನಲ್ ನೀಡಿದ ಬಳಿಕವೇ ಪ್ರಕ್ರಿಯೆ ಮುಂದುವರೆಯಲಿದೆ ಎಂದು ವರದಿಯಾಗಿದೆ.
 

ಸಲಹಾ ಸಮಿತಿ ನೇಮಿಸಿರುವ ಬೌಲಿಂಗ್ ಮತ್ತು ಬ್ಯಾಟಿಂಗ್ ಕೋಚ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ರವಿಶಾಸ್ತ್ರೀ, ಈಗಾಗಲೇ ಇರುವ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಜೊತೆ ಫುಲ್ ಟೈಮ್ ಬೌಲಿಂಗ್ ಕೋಚ್ ಬೇಕೆಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದ್ದು, ಆಡಳಿತ ಮಂಡಳಿ ಮೂರೂ ಆಯ್ಕೆಯನ್ನ ತಡೆಹಿಡಿದಿದೆ.

ಬಿಸಿಸಿಐನ ಕಾನೂನು ವಿಭಾಗ ರವಿಶಾಸ್ತ್ರಿ ಜೊತೆಗಿನ ಒಪ್ಪಂದದ ಪತ್ರಗಳ ಸಿದ್ಧತೆಗೆ ಆಡಳಿತ ಮಂಡಳಿ ತಡೆ ವಿಧಿಸಿದ್ದು, ನಾವು ಹೇಳುವವರೆಗೂ ಕಾಗದ ಪತ್ರ ರರೆಡಿ ಮಾಡದಂತೆ ಆದೇಶಿಸಿದೆಯಂತೆ.ಜೊತೆಗೆ ಜಹೀರ್ ಖಾನ್ ಕೇಳುತ್ತಿರುವ 4 ಕೋಟಿ ಸಂಭಾವನೆ ನೀಡಲು ಬಿಸಿಸಿಐ ಸಿದ್ಧವಿಲ್ಲ ಎನ್ನಲಾಗಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments