Webdunia - Bharat's app for daily news and videos

Install App

ಭಾರತದ ಭದ್ರತೆ ಬಲಿಕೊಟ್ಟು ಪಾಕ್ ಜೊತೆ ಕ್ರಿಕೆಟ್ ಆಡುವುದಿಲ್ಲ: ಬಿಸಿಸಿಐ ಎಚ್ಚರಿಕೆ

Webdunia
ಸೋಮವಾರ, 27 ಜುಲೈ 2015 (18:04 IST)
ಭಾರತೀಯರ ಭದ್ರತೆಯನ್ನು ಅಪಾಯದಲ್ಲಿಟ್ಟು ಭಾರತ-ಪಾಕ್ ಕ್ರಿಕೆಟ್ ಸಂಬಂಧ ಮುಂದುವರಿಯುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಸೋಮವಾರ ತಿಳಿಸಿದ್ದಾರೆ. ಪಂಜಾಬ್‌ನಲ್ಲಿ ಸೋಮವಾರ ಭಯೋತ್ಪಾದನೆ ದಾಳಿಯನ್ನು ಗಮನದಲ್ಲಿಟ್ಟುಕೊಂಡು ಠಾಕೂರ್ ಹೇಳಿದ್ದಾರೆ.

  ನಮ್ಮ ರಾಷ್ಟ್ರದ ಭದ್ರತೆ ಮತ್ತು ಶಾಂತಿಗೆ ಅಪಾಯ ಉಂಟಾದಾಗ ಕ್ರಿಕೆಟ್ ಆಡುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಪಾಕಿಸ್ತಾನ ತಿಳಿದಿರಬೇಕು. ಕ್ರೀಡೆ ಭಿನ್ನವಾಗಿದ್ರೂ, ನಮ್ಮ ಆಂತರಿಕ ಭದ್ರತೆ ಕೂಡ ಅಷ್ಟೇ ಮುಖ್ಯವಾಗಿದೆ ಎಂದು ಠಾಕುರ್ ಹೇಳಿದರು.
 
ಐಸಿಸಿ ಭವಿಷ್ಯದ ಪ್ರವಾಸ ಕಾರ್ಯಕ್ರಮದ ರೀತ್ಯಾ ಕಡುವೈರಿ ಪಾಕಿಸ್ತಾನದ ಜೊತೆ ಭಾರತ ದ್ವಿಪಕ್ಷೀಯ ಸರಣಿ ಆಡಲು ನಿಗದಿಯಾಗಿದ್ದು, ಎರಡು ಟೆಸ್ಟ್ ಮತ್ತು ಐದು ಏಕದಿನ ಪಂದ್ಯಗಳನ್ನು ಅದು ಒಳಗೊಂಡಿದೆ. 
 
ಬಹುನಿರೀಕ್ಷಿತ ಸರಣಿಯನ್ನು ಯುಎಇಯಲ್ಲಿ ಆಡಲಾಗುವುದೆಂದು ನಿರೀಕ್ಷಿಸಲಾಗಿತ್ತು. ಆದರೆ ಪಂಜಾಬ್‌ನಲ್ಲಿ ಸೋಮವಾರ ಭಯೋತ್ಪಾದನೆ ದಾಳಿ ಬಳಿಕ ಉಭಯ ರಾಷ್ಟ್ರಗಳ ನಡುವೆ ಕ್ರಿಕೆಟ್ ಸರಣಿ ಅನುಮಾನಾಸ್ಪದವಾಗಿದೆ. 
 
ಬಿಸಿಸಿಐ ಪಾಕ್ ಜತೆ ಆಡುವ ಮುಂಚೆ ಕೆಲವು ವಿಷಯಗಳನ್ನು ಇತ್ಯರ್ಥಮಾಡಿಕೊಳ್ಳಬೇಕಿದೆ. ಮಾತುಕತೆಗೆ ಮಂಡಳಿಗೆ ಆಕ್ಷೇಪವೇನೂ ಇಲ್ಲ. ಆದರೆ ರಾಷ್ಟ್ರದ ಭದ್ರತೆ ಕೂಡ ಅಷ್ಟೇ ಮುಖ್ಯವಾಗಿದೆ ಎಂದು ಠಾಕುರ್ ಹೇಳಿದರು.  ಠಾಕುರ್ ಬಳಿಕ ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟರ್‌ನಲ್ಲಿ ಪಂಜಾಬ್ ಭಯೋತ್ಪಾದನೆ ದಾಳಿಯನ್ನು ಖಂಡಿಸಿದರು. 

 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments