ಜಾರ್ಖಂಡ್ ವಿಧಾನಸಭಾ ಚುನಾವಣೆಯ ರಾಯಭಾರಿಯಾಗಿ ಕ್ರಿಕೆಟ್‌ ದಿಗ್ಗಜ ಧೋನಿ

Sampriya
ಭಾನುವಾರ, 27 ಅಕ್ಟೋಬರ್ 2024 (11:38 IST)
Photo Courtesy X
ರಾಂಚಿ: ಮುಂದಿನ ತಿಂಗಳು ನಡೆಯುವ ಜಾರ್ಖಂಡ್ ವಿಧಾನಸಭಾ ಚುನಾವಣೆ ರಾಯಭಾರಿಯಾಗಿ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ, ಕ್ರಿಕೆಟ್‌ ದಿಗ್ಗಜ  ಮಹೇಂದ್ರ ಸಿಂಗ್ ಧೋನಿ ಅವರನ್ನು ಚುನಾವಣಾ ಆಯೋಗ ಆಯ್ಕೆ ಮಾಡಿದೆ.

ವಿಧಾನಸಭಾ ಚುನಾವಣೆಗೆ ಧೋನಿ ತಮ್ಮ ಫೋಟೋವನ್ನು ಬಳಸಲು ಧೋನಿ ಅವರರು ಚುನಾವಣಾ ಆಯೋಗಕ್ಕೆ ಒಪ್ಪಿಗೆ ನೀಡಿದ್ದಾರೆ. ಜೊತೆಗೆ ಇನ್ಯಾವುದೇ ವಿವರ ಬೇಕಾದಲ್ಲಿ ಅವರ ಒಪ್ಪಿಗೆಯ ಮೇರೆಗೆ ತೆಗೆದುಕೊಳ್ಳಲಾಗುವುದು ಎಂದು ಜಾರ್ಖಂಡ್‌ ಮುಖ್ಯ ಚುನಾವಣಾಧಿಕಾರಿ ಕೆ.ರವಿಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸ್ವೀಪ್‌ (ಸಿಸ್ಟಮ್ಯಾಟಿಕ್ ವೋಟರ್ಸ್ ಎಜುಕೇಶನ್ ಮತ್ತು ಎಲೆಕ್ಟೋರಲ್ ಪಾರ್ಟಿಸಿಪೇಷನ್) ಕಾರ್ಯಕ್ರಮದ ಅಡಿಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಧೋನಿ ಭಾಗಿಯಾಗಲಿದ್ದಾರೆ. ವಿಶೇಷವಾಗಿ ಮತದಾರರಲ್ಲಿ ಮತ ಚಲಾಯಿಸುವಂತೆ ಪ್ರೋತ್ಸಾಹಿಸುತ್ತಾರೆ ಎಂದು ಚುನಾವಣಾ ಆಯೋಗ ಆಶಿಸುತ್ತದೆ ಎಂದರು.

ನ.13 ರಂದು ಮೊದಲ ಹಂತದಲ್ಲಿ ಒಟ್ಟು 43 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈಗಾಗಲೇ ಶುಕ್ರವಾರ (ಅ.25ರಂದು) ನಾಮಪತ್ರ ಸಲ್ಲಿಕೆ ಪೂರ್ಣಗೊಂಡಿದೆ.

ನಾಮಪತ್ರ ಸಲ್ಲಿಸಿದವರ ಪೈಕಿ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಸರೈಕೆಲಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್ ಪಕ್ಷದ ಅಧ್ಯಕ್ಷ ಮತ್ತು ಜಾರ್ಖಂಡ್‌ನ ಮಾಜಿ ಉಪಮುಖ್ಯಮಂತ್ರಿ ಸುದೇಶ್ ಮಹತೋ ಅವರು ಸಿಲ್ಲಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಕೋಮಾದಿಂದ ಚೇತರಿಸಿಕೊಂಡ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅಭಿಮಾನಿಗಳಿಗೆ ಮೊದಲ ಸಂದೇಶ

ಕೆಎಲ್ ರಾಹುಲ್ ಸು ಫ್ರಮ್ ಸೊ ಮೂವಿ ನೋಡಿದ್ದಾರೆ, ಆದ್ರೆ ಗರುಡ ಗಮನ ಸಿನಿಮಾ ಗೊತ್ತೇ ಇಲ್ವಂತೆ

ಕೆಎಲ್ ರಾಹುಲ್ ಗೆ ಲೆಫ್ಟ್ ರೈಟ್ ಮಂಗಳಾರತಿ ಮಾಡಿದ್ದ ರಾಹುಲ್ ದ್ರಾವಿಡ್: ಇಂಟ್ರೆಸ್ಟಿಂಗ್ ಕಹಾನಿ

IND vs AUS: ಭಾರತ, ಆಸ್ಟ್ರೇಲಿಯಾ ವನಿತೆಯರ ಇಂದು ವಿಶ್ವಕಪ್ ಸೆಮಿಫೈನಲ್ ನಡೆಯುವುದೇ ಅನುಮಾನ

ಮುಂದಿನ ಸುದ್ದಿ
Show comments