ವಿಶ್ವಕಪ್ ತಂಡದಲ್ಲಿ ಮೂಲೆಗುಂಪಾದ ಕ್ರಿಕೆಟಿಗರಿವರು

Webdunia
ಭಾನುವಾರ, 12 ಸೆಪ್ಟಂಬರ್ 2021 (11:35 IST)
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಅವಕಾಶದ ನಿರೀಕ್ಷೆಯಲ್ಲಿದ್ದ ಕೆಲವು ಆಟಗಾರರಿಗೆ ನಿರಾಸೆಯಾಗಿದೆ. ಅವರು ಯಾರೆಲ್ಲಾ ಎಂದು ನೋಡೋಣ.


ಶಿಖರ್ ಧವನ್: ಧವನ್ ಹಿರಿತನದ ಆಧಾರದ ಮೇಲೆ ಸ್ಥಾನ ಪಡೆಯಬಹುದು ಎಂದು ನಿರೀಕ್ಷಿಸಿದ್ದರು. ಆದರೆ ಅವರ ಪ್ರಸಕ್ತ ಫಾರ್ಮ್ ಮತ್ತು ಓಪನಿಂಗ್ ಸ್ಥಾನಕ್ಕೆ ಇದ್ದ ಪೈಪೋಟಿಯಿಂದಾಗಿ ಸ್ಥಾನ ಕಳೆದುಕೊಂಡಿದ್ದಾರೆ.

ಕೃನಾಲ್ ಪಾಂಡ್ಯ: ಸಹೋದರ ಹಾರ್ದಿಕ್ ಪಾಂಡ್ಯ ಜೊತೆಗೆ ಟೀಂ ಇಂಡಿಯಾ ಟಿ20 ಫಾರ್ಮ್ಯಾಟ್ ನಲ್ಲಿ ಸ್ಥಾನ ಪಡೆಯುತ್ತಿದ್ದ ಆಲ್ ರೌಂಡರ್ ಕೃನಾಲ್ ಪಾಂಡ್ಯ ಈ ಮೊದಲು ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡಿರಲಿಲ್ಲ. ಹೀಗಾಗಿ ಅವರಿಗೆ ಕೊಕ್ ನೀಡಲಾಗಿದೆ.

ಯಜುವೇಂದ್ರ ಚಾಹಲ್: ಇತ್ತೀಚೆಗಿನ ದಿನಗಳಲ್ಲಿ ಚಾಹಲ್ ಟೀಂ ಇಂಡಿಯಾದಲ್ಲಿ ಪ್ರಭಾವಿ ಎನಿಸಿಕೊಂಡಿರಲಿಲ್ಲ. ಅವರ ಬೌಲಿಂಗ್ ಕೊಂಚ ಕಳೆಗುಂದಿತ್ತು. ಹೀಗಾಗಿ ಕೊನೆಯ ಕ್ಷಣದಲ್ಲಿ ಅವರಿಗೆ ಅವಕಾಶ ಕೈತಪ್ಪಿ ಹೋಯಿತು.

ಪೃಥ್ವಿ ಶಾ: ಆರಂಭಿಕ ಸ್ಥಾನಕ್ಕೆ ಈಗಾಗಲೇ ತಂಡದಲ್ಲಿ ಸಾಕಷ್ಟು ಜನರಿದ್ದಾರೆ. ಹೀಗಾಗಿ ಪ್ರತಿಭೆ, ಫಾರ್ಮ್ ಇದ್ದರೂ ಪೃಥ್ವಿ ಶಾ ಆಯ್ಕೆಯಾಗಲಿಲ್ಲ.

ಇವರಲ್ಲದೆ, ಟಿ. ನಟರಾಜನ್, ಮೊಹಮ್ಮದ್ ಸಿರಾಜ್, ಮನೀಶ್ ಪಾಂಡೆ ಕೂಡಾ ಸ್ಥಾನ ವಂಚಿತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments