ಬೆಂಗಳೂರಿಗೇ ಬಂದು ಆರ್ ಸಿಬಿಯ ಅವಮಾನಿಸಿದ ಸಿಎಸ್ ಕೆ ಕ್ಯಾಪ್ಟನ್ ಋತುರಾಜ್ ಗಾಯಕ್ವಾಡ್: ವಿಡಿಯೋ

Krishnaveni K
ಶುಕ್ರವಾರ, 20 ಡಿಸೆಂಬರ್ 2024 (11:28 IST)
Photo Credit: X
ಬೆಂಗಳೂರು: ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಸಿಎಸ್ ಕೆ ನಾಯಕ ಋತುರಾಜ್ ಗಾಯಕ್ವಾಡ್, ಆರ್ ಸಿಬಿ ತಂಡವನ್ನೇ ಕಿಚಾಯಿಸಿದ ವಿಡಿಯೋ ವೈರಲ್ ಆಗಿದೆ. ಇದು ಆರ್ ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಆರ್ ಸಿಬಿ ಮತ್ತು ಸಿಎಸ್ ಕೆ ನಡುವೆ ಮೈದಾನದಲ್ಲಿ ಮತ್ತು ಫ್ಯಾನ್ಸ್ ನಡುವನ ಜಿದ್ದಾಜಿದ್ದಿ ಎಲ್ಲರಿಗೂ ಗೊತ್ತೇ ಇದೆ. ಕಳೆದ ಸೀಸನ್ ನಲ್ಲಿ ಸಿಎಸ್ ಕೆ ಅಂತಿಮ ಘಟ್ಟದಿಂದ ಹೊರಬೀಳಲು ಕಾರಣವಾಗಿದ್ದರೂ ಆರ್ ಸಿಬಿ. ಈ ಎರಡೂ ತಂಡಗಳ ಅಭಿಮಾನಿಗಳು ಪರಸ್ಪರ ಕಚ್ಚಾಡಿದ ಹಲವು ಉದಾಹರಣೆಗಳಿವೆ.

ಇದೀಗ ಋತುರಾಜ್ ಗಾಯಕ್ವಾಡ್ ಬೆಂಗಳೂರಿನಲ್ಲಿ ಇನ್ ಫೋಸಿಸ್ ನಡೆಸಿದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬಂದಿದ್ದಾರೆ. ಈ ವೇಳೆ ಅವರನ್ನು ವೇದಿಕೆಯಲ್ಲಿ ನಿಲ್ಲಿಸಿ ಮಾತನಾಡಿಸಲು ನಿರೂಪಕರು ಆರಂಭಿಸಿದ್ದಾರೆ.

ಅವರಿಗೆ ಮೊದಲ ಪ್ರಶ್ನೆ ಕೇಳಿದಾಗ ಮೈಕ್ ಆಫ್ ಆಗಿದ್ದು ಋತುರಾಜ್ ಕೊಂಚ ಇರಿಸು ಮುರಿಸುಗೊಂಡರು. ಬಳಿಕ ‘ಬಹುಶಃ ಆರ್ ಸಿಬಿಯವರು ಯಾರೋ ಮೈಕ್ ಆಫ್ ಮಾಡಿರಬೇಕು’ ಎಂದು ತಮಾಷೆ ಮಾಡಿದ್ದಾರೆ. ಇದು ಆರ್ ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಬೆಂಗಳೂರಿಗೇ ಬಂದು ಆರ್ ಸಿಬಿಗೆ ಅವಮಾನ ಮಾಡಿದ್ದೀರಿ. ಇದು ಸರಿಯಲ್ಲ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments