ಧೋನಿ ಕನಸು ನನಸಾಗಲು ಇನ್ನೊಂದೇ ಮೆಟ್ಟಿಲು ಬಾಕಿ

Webdunia
ಬುಧವಾರ, 23 ಮೇ 2018 (09:24 IST)
ಮುಂಬೈ: ನಿನ್ನೆ ನಡೆದ ಐಪಿಎಲ್ ಪ್ಲೇ ಆಫ್ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 2 ವಿಕೆಟ್ ಗಳ ರೋಚಕ ಜಯ ದಾಖಲಿಸಿದೆ. ಈ ಮೂಲಕ ಎರಡು ವರ್ಷಗಳ ಬಳಿಕ ಮತ್ತೆ ಸಿಎಸ್ ಕೆಗೆ ಮರಳಿದ ಧೋನಿಯ ಪ್ರಶಸ್ತಿ ಗೆಲ್ಲುವ ಕನಸಿನ ಹೊಸ್ತಿಲಿಗೆ ಬಂದಿದೆ.

ಮ್ಯಾಚ್ ಫಿಕ್ಸಿಂಗ್ ಕಳಂಕದಿಂದಾಗಿ ಎರಡು ವರ್ಷ ನಿಷೇಧಕ್ಕೊಳಗಾಗಿದ್ದ ಸಿಎಸ್ ಕೆ ಈ ಆವೃತ್ತಿಗೆ ಮರಳಿ ಬಂದಾಗ ಧೋನಿ ಕೂಡಾ ತಂಡವನ್ನು ಕೂಡಿಕೊಂಡಿದ್ದಾರೆ. ನಾಯಕನಾಗಿ ಸಿಎಸ್ ಕೆಗೆ ಈಗಾಗಲೇ ಮೂರು ಬಾರಿ ಐಪಿಎಲ್ ಟ್ರೋಫಿ ಕೊಡಿಸಿರುವ ಧೋನಿಗೆ ಮತ್ತೊಮ್ಮೆ ಅದೇ ಕಮಾಲ್ ಮಾಡಲು ಮತ್ತೊಂದು ಅವಕಾಶ ಸಿಕ್ಕಿದೆ.

ಈ ಬಾರಿ ಗೆಲುವಿನೊಂದಿಗೆ ಐಪಿಎಲ್ ಗೆ ಗುಡ್ ಬೈ ಹೇಳಲೂ ಧೋನಿ ಚಿಂತನೆ ನಡೆಸಿದ್ದಾರೆ. ನಿನ್ನೆ ನಡೆದ ಪಂದ್ಯದಲ್ಲಿ ಬೌಲರ್ ಗಳದ್ದೇ ಮೆರೆದಾಟವಾಗಿತ್ತು. ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 139 ರನ್ ಗಳಿಸಲಷ್ಟೇ ಶಕ್ತವಾಯಿತು.

ಬಳಿಕ ಬ್ಯಾಟಿಂಗ್ ಆರಂಭಿಸಿದ ಸಿಎಸ್ ಕೆಗೂ ಆರಂಭದಲ್ಲಿಯೇ ಆಘಾತ ಸಿಕ್ಕಿತ್ತು. ಶೇನ್ ವ್ಯಾಟ್ಸನ್ ಶೂನ್ಯಕ್ಕೇ ಔಟಾಗಿ ಪೆವಿಲಿಯನ್ ಸೇರಿಕೊಂಡಿದ್ದರು. ಆದರೆ ನಂತರ ಫಾ ಡು ಪ್ಲೆಸಿಸ್ (67) ಮತ್ತು ಸುರೇಶ್ ರೈನಾ (22) ತಂಡಕ್ಕೆ ಚೇತರಿಕೆ ನೀಡಿದರು. ಇವರ ಬೆನ್ನಲ್ಲೇ ಸಿಎಸ್ ಕೆ ಪಟ ಪಟನೆ ವಿಕೆಟ್ ಉದುರಿಸಿಕೊಂಡಿತಾದರೂ, ಮೊತ್ತ ಸಣ್ಣದಾಗಿದ್ದರಿಂದ ಉಳಿದ ಬ್ಯಾಟ್ಸ್ ಮನ್ ಗಳು ಹಾಗೂ ಹೀಗೂ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಅಂತಿಮವಾಗಿ ಸಿಎಸ್ ಕೆ 8 ವಿಕೆಟ್ ನಷ್ಟಕ್ಕೆ 19.1 ಓವರ್ ಗಳಲ್ಲಿ 140 ರನ್ ಗಳಿಸಿ ಫೈನಲ್ ಗೆ ಲಗ್ಗೆಯಿಟ್ಟಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments