Webdunia - Bharat's app for daily news and videos

Install App

ಏಕದಿನ ವಿಶ್ವಕಪ್: ಆಸ್ಟ್ರೇಲಿಯಾ-ಬಾಂಗ್ಲಾದೇಶ ನಡುವಿನ ಪಂದ್ಯಕ್ಕೆ ಲಂಕಾಕ್ಕೆ ಮಹತ್ವದ್ದು ಯಾಕೆ ಗೊತ್ತಾ?

Webdunia
ಶನಿವಾರ, 11 ನವೆಂಬರ್ 2023 (08:40 IST)
ಪುಣೆ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ನಡುವೆ ಔಪಚಾರಿಕ ಪಂದ್ಯ ನಡೆಯಲಿದೆ. ಹಾಗಿದ್ದರೂ ಇಂದು ನಡೆಯುವ ಪಂದ್ಯಗಳು ಶ್ರೀಲಂಕಾ ತಂಡಕ್ಕೆ ಮಹತ್ವದ್ದು ಯಾಕೆ ಗೊತ್ತಾ?

ಆಸ್ಟ್ರೇಲಿಯಾ ಈಗಾಗಲೇ 8 ಪಂದ್ಯಗಳಿಂದ 6 ಗೆಲುವು ಸಾಧಿಸಿ ಸೆಮಿಫೈನಲ್ ಗೇರಿದೆ. ಹೀಗಾಗಿ ಇಂದಿನ ಸೋಲು-ಗೆಲುವು ಆ ತಂಡ ಸೆಮಿಫೈನಲ್ ಹಾದಿಗೆ ಭಂಗ ತಾರದು.

ಅತ್ತ ಬಾಂಗ್ಲಾದೇಶ ಈಗಾಗಲೇ 8 ರಿಂದ ಕೇವಲ 2 ಗೆಲುವು ಕಂಡಿದ್ದು, ಟೂರ್ನಿಯಿಂದ ಈಗಾಗಲೇ ಹೊರಬಿದ್ದಿದೆ. ಹೀಗಾಗಿ ಇಂದಿನ ಫಲಿತಾಂಶ ಬಾಂಗ್ಲಾಕ್ಕೆ ಈ ವಿಶ್ವಕಪ್ ನಲ್ಲಿ ಹೆಚ್ಚಿನ ಲಾಭ/ನಷ್ಟವಾಗದು. ಆದರೆ ನಿಜವಾದ ನಷ್ಟವಾಗುವುದು ಲಂಕಾಗೆ. ಒಂದು ವೇಳೆ ಇಂದು ಬಾಂಗ್ಲಾ ಹೀನಾಯವಾಗಿ ಸೋತರೆ ಲಂಕಾಗೆ 2025 ರ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲು ಅನುಕೂಲವಾಗಲಿದೆ. ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲು ಈ ವಿಶ್ವಕಪ್ ನ ಅಗ್ರ 7 ತಂಡಗಳಿಗೆ ಮಾತ್ರ ಅವಕಾಶವಿದೆ. ಸದ್ಯಕ್ಕೆ ಅಂಕಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿರುವ ಲಂಕಾಗೆ ಈ ಅವಕಾಶ ಸಿಗುವ ಸಾಧ‍್ಯತೆ ತೀರಾ ಕಡಿಮೆ. ಇದಕ್ಕೆ ಬಾಂಗ್ಲಾ ಹೀನಾಯವಾಗಿ ಸೋತರೆ ಮತ್ತು ಇಂದು ನಡೆಯುವ ಮತ್ತೊಂದು ಪಂದ್ಯದಲ್ಲಿ ಇಂಗ್ಲೆಂಡ್ ಹೀನಾಯವಾಗಿ ಸೋತರೆ ಮಾತ್ರ ಸಾಧ‍್ಯ. ಈ ಪಂದ್ಯ ಬೆಳಿಗ್ಗೆ 10.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments