ಏಕದಿನ ವಿಶ್ವಕಪ್: ಚಿನ್ನಸ್ವಾಮಿಯಲ್ಲಿ ರನ್ ಹೊಳೆ

Webdunia
ಶನಿವಾರ, 4 ನವೆಂಬರ್ 2023 (17:29 IST)
ಬೆಂಗಳೂರು: ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವೆ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಎರಡೂ ತಂಡಗಳೂ ರನ್ ಹೊಳೆ ಹರಿಸಿವೆ.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 401 ರನ್ ಗಳಿಸಿತು. ರಚಿನ್ ರವೀಂದ್ರ 108, ಕೇನ್ ವಿಲಿಯಮ್ಸನ್ 95, ಗ್ಲೆನ್ ಫಿಲಿಪ್ಸ್ 45 ರನ್ ಚಚ್ಚಿದರು. ಪಾಕ್ ಪರ ಮೊಹಮ್ಮದ್ ವಾಸಿಂ ಜ್ಯೂನಿಯರ್ 3 ವಿಕೆಟ್ ಕಬಳಿಸಿದರು.

ಕಿವೀಸ್ ರನ್ ಹೊಳೆ ಮುಗಿಯುತ್ತಿದ್ದಂತೇ ಪಾಕ್ ಅದಕ್ಕಿಂತ ತಾನೇನು ಕಡಿಮೆ ಎನ್ನುವಂತೆ ಅಬ್ಬರಿಸಲು ಶುರು ಮಾಡಿತು. ಕೇವಲ 21.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 160 ರನ್ ಚಚ್ಚಿತು. ಆದರೆ ದುರದೃಷ್ಟವಶಾತ್ ಅಷ್ಟರಲ್ಲೇ ಮಳೆ ಸುರಿಯಲು ಆರಂಭವಾಯಿತು. ಇದೀಗ ಹನಿ ಮಳೆಯಾಗುತ್ತಿದ್ದು, ಮಳೆ ನಿಂತರೂ ಓವರ್ ಕಡಿತವಾಗುವ ಸಂಭವವಿದೆ.

ಪಾಕ್ ಪರ ಫಕರ್ ಜಮಾನ್ 69 ಎಸೆತಗಳಲ್ಲಿ 9 ಸಿಕ್ಸರ್ ಸಹಿತ 106 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರಿಗೆ ಸಾಥ್ ನೀಡುತ್ತಿರುವ ನಾಯಕ ಬಾಬರ್ ಅಜಮ್ 41 ರನ್ ಗಳಿಸಿದ್ದಾರೆ. ಪಾಕ್ ರನ್ ವೇಗ ನೋಡಿದರೆ ಯಶಸ್ವಿಯಾಗಿ 400 ರನ್ ಗಳನ್ನು ಚೇಸ್ ಮಾಡಲಿದೆ ಎನಿಸುತ್ತಿತ್ತು. ಆದರೆ ಕುತೂಹಲಕಾರಿ ಘಟ್ಟದಲ್ಲಿ ಮಳೆ ಸುರಿದು ಪಾಕ್ ಓಟಕ್ಕೆ ಕಡಿವಾಣ ಹಾಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments