ರವೀಂದ್ರ ಜಡೇಜಾ ಮೇಲೆ ಧೋನಿ ಬಾಸ್ ಗಿರಿಯೇ ಸೋಲಿಗೆ ಕಾರಣವಾ?!

Webdunia
ಮಂಗಳವಾರ, 5 ಏಪ್ರಿಲ್ 2022 (09:00 IST)
ಮುಂಬೈ: ಐಪಿಎಲ್ ನಲ್ಲಿ ಯಾವತ್ತೂ ಪ್ರಬಲ ತಂಡವೆಂದೇ ಪರಿಗಣಿಸಲ್ಪಡುವ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಆಡಿದ ಮೂರೂ ಪಂದ್ಯಗಳನ್ನು ಸೋತು ನಿರಾಶೆಯಲ್ಲಿದೆ.

ಈ ಐಪಿಎಲ್ ಗೆ ಎರಡು ದಿನ ಬಾಕಿಯಿರುವಾಗ ಧೋನಿ ನಾಯಕತ್ವವನ್ನು ರವೀಂದ್ರ ಜಡೇಜಾಗೆ ಬಿಟ್ಟುಕೊಟ್ಟಿದ್ದರು. ಆದರೆ ಜಡೇಜಾಗೆ ಯಾಕೋ ಅದೃಷ್ಟ ಕೈ ಹಿಡಿಯುತ್ತಿಲ್ಲ. ಜಡೇಜಾ ನಾಯಕರಾದರೂ ಧೋನಿ ಈಗಲೂ ಸೂಪರ್ ಕ್ಯಾಪ್ಟನ್ ಆಗಿ ತಂಡದ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಈ ಬಗ್ಗೆ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಮಾತನಾಡಿದ್ದು, ಜಡೇಜಾ ಮೇಲೆ ಧೋನಿ ಬಾಸ್ ಗಿರಿಯೇ ಅವರಿಗೆ ಮುಳುವಾಗುತ್ತಿದೆ ಎಂದು ಟೀಕಿಸಿದ್ದಾರೆ.  ಇದಕ್ಕೆ ತಾಜಾ ಉದಾಹರಣೆಯೆಂದರೆ ಲಕ್ನೋ ವಿರುದ್ಧದ ಪಂದ್ಯ. ಈ ಪಂದ್ಯದಲ್ಲಿ ಶಿವಂ ದುಬೆಗೆ ಅಂತಿಮ ಹಂತದಲ್ಲಿ ಬೌಲಿಂಗ್ ಮಾಡಲು ಹೇಳಿದ್ದು ಧೋನಿ. ಆದರೆ ದುಬೆ ಯರ್ರಾ ಬಿರ್ರಿ ರನ್ ನೀಡಿ ಸಿಎಸ್ ಕೆ ಸೋಲಿಗೆ ಕಾರಣರಾದರು. ಮೈದಾನದಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸ್ವಾತಂತ್ರ್ಯ ಇನ್ನೂ ಜಡೇಜಾಗಿಲ್ಲ. ಈ ಗೊಂದಲಗಳಿಂದಾಗಿಯೇ ಸಿಎಸ್ ಕೆ ಸೋಲುತ್ತಿದೆ ಎನ್ನುವುದು ಜಡೇಜಾ ಮಾತು. ಹಲವರು ಇದೇ ಅಭಿಪ್ರಾಯ ಹೊಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments