Webdunia - Bharat's app for daily news and videos

Install App

ಚೆನ್ನೈನಲ್ಲಿ ಶ್ರೀನಿವಾಸನ್ ಭೇಟಿ ಮಾಡಿದ ಧೋನಿ ವಿರುದ್ಧ ಟೀಕೆ

Webdunia
ಶುಕ್ರವಾರ, 23 ಅಕ್ಟೋಬರ್ 2015 (18:46 IST)
ಭಾರತದ ಏಕದಿನ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಬಿಸಿಸಿಐ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರ ನಿವಾಸದಲ್ಲಿ ಭೇಟಿ ಮಾಡಿದ್ದಕ್ಕೆ ಕೆಲವು ವಲಯಗಳಿಂದ ಟೀಕೆ ಎದುರಿಸಿದ್ದಾರೆ.  ಧೋನಿ ಶ್ರೀನಿವಾಸನ್ ಅವರನ್ನು ಉಪಾಹಾರದಲ್ಲಿ ಭೇಟಿ ನೀಡಿ ಸುಮಾರು 45 ನಿಮಿಷಗಳ ಕಾಲ ಅವರಜತೆ ಇದ್ದರು. ಅವರು ನಿರ್ಗಮಿಸಿದ ನಂತರ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಶ್ರೀನಿವಾಸನ್ ಅವರನ್ನು ಭೇಟಿಯಾಗಿದ್ದರು.
 
ಐಪಿಎಲ್ ಫ್ರಾಂಚೈಸಿ ತಂಡ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕರಾಗಿದ್ದ ಶ್ರೀನಿವಾಸನ್ ಅವರು ಹಿತಾಸಕ್ತಿ ಸಂಘರ್ಷದ ಕಾರಣದಿಂದ ಚೆನ್ನೈ ತಂಡದಿಂದ ಬೇರೆಯಾಗಿದ್ದರು. 
 ಶ್ರೀನಿವಾಸನ್ ಅಳಿಯನ ವಿರುದ್ಧ ಫಿಕ್ಸಿಂಗ್ ಆರೋಪ ಕೇಳಿಬಂದ ಬಳಿಕ ಶ್ರೀನಿವಾಸನ್‌ ಅವರನ್ನು ಬಿಸಿಸಿಐ ಅಧ್ಯಕ್ಷ ಹುದ್ದೆಯಿಂದ ವಜಾ ಮಾಡಲಾಗಿತ್ತು. ಈಗ ಅವರು ಐಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಸಿಎಸ್‌ಕೆ ಮತ್ತು ರಾಜಸ್ಥಾನ ರಾಯಲ್ಸ್ ಎರಡೂ ತಂಡಗಳನ್ನು ಲೋಧಾ ಸಮಿತಿಯು ಐಪಿಎಲ್‌ನಿಂದ 2 ವರ್ಷಗಳ ಕಾಲ ನಿಷೇಧ ವಿಧಿಸಿದೆ. ಧೋನಿ ಸಿಎಸ್‌ಕೆಯ ನಾಯಕರಾಗಿ ಕಳೆದ 8 ಸೀಸನ್‌ನಿಂದ ಕಾರ್ಯನಿರ್ವಹಿಸಿದ್ದು, ಈ ಭೇಟಿಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಆದರೆ ಧೋನಿ ಶ್ರೀನಿವಾಸನ್ ಅವರನ್ನು ಭೇಟಿಯಾಗುವ ಅಗತ್ಯವೇನಿತ್ತು ಎಂಬ ಪ್ರಶ್ನೆ ಕೆಲವು ವಲಯಗಳಲ್ಲಿ ಹರಿದಾಡುತ್ತಿದೆ. 
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments