Webdunia - Bharat's app for daily news and videos

Install App

ಬೇಕೆಂದೇ ಸಮಯ ವ್ಯರ್ಥ ಮಾಡಿದ ಧೋನಿ ವಿರುದ್ಧ ಆಕ್ರೋಶ

Webdunia
ಬುಧವಾರ, 24 ಮೇ 2023 (08:30 IST)
ಚೆನ್ನೈ: ಗುಜರಾತ್ ಟೈಟನ್ಸ್ ವಿರುದ್ಧದ ಐಪಿಎಲ್ 2023 ಪ್ಲೇ ಆಫ್ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ಸಿಎಸ್ ಕೆ ನಾಯಕ ಧೋನಿ ವರ್ತನೆ ಈಗ ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ.

ಸಾಮಾನ್ಯವಾಗಿ ಧೋನಿ ಮೈದಾನದಲ್ಲಿ ಕೂಲ್ ಆಗಿ ಇರುತ್ತಾರೆ. ಮಾತ್ರವಲ್ಲ, ಕ್ರೀಡಾ ಸ್ಪೂರ್ತಿ ಮರೆಯುವುದಿಲ್ಲ. ಆದರೆ ನಿನ್ನೆಯ ಪಂದ್ಯದಲ್ಲಿ ತಮ್ಮ ತಂಡದ ಮತೀಶ ಪತಿರಾನಗೆ ಬೌಲಿಂಗ್ ಅವಕಾಶ ನೀಡಲು ಬೇಕೆಂದೇ ಸಮಯ ವ್ಯರ್ಥ ಮಾಡಿದ್ದಾರೆ. ಈ ಘಟನೆ ಬಗ್ಗೆ ಸ್ವತಃ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಕೂಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪತಿರಾನ ಕೆಲವು ಸಮಯ ಮೈದಾನದಿಂದ ಹೊರಗಿದ್ದರು. ಬಳಿಕ ಇದ್ದಕ್ಕಿದ್ದಂತೆ ಮೈದಾನಕ್ಕೆ ಬಂದು ಬೌಲಿಂಗ್ ಮಾಡಲು ಹೊರಟರು. ಆಗ ಅಂಪಾಯರ್ ಅವರಿಗೆ ಬೌಲಿಂಗ್ ಮಾಡಲು ಅವಕಾಶ ಕೊಡಲಿಲ್ಲ. ಒಬ್ಬ ಆಟಗಾರ 9 ನಿಮಿಷಕ್ಕಿಂತ ಹೆಚ್ಚು ಮೈದಾನದಿಂದ ಹೊರಗಿದ್ದರೆ ಮೈದಾನಕ್ಕೆ ಬಂದ ಮೇಲೆ ನಾಲ್ಕು ನಿಮಿಷಗಳ ಬಳಿಕವಷ್ಟೇ ಬೌಲಿಂಗ್ ಗೆ ಅವಕಾಶ ನೀಡಬಹುದು.

ಆದರೆ ಪತಿರಾನಗೆ ಬೌಲಿಂಗ್ ಅವಕಾಶ ನಿರಾಕರಿಸಿದ್ದಕ್ಕೆ ಧೋನಿ ಬೇಕೆಂದೇ ಅಂಪಾಯರ್ ಗಳ ಬಳಿ ಅವರ ನಿರ್ಧಾರ ಪ್ರಶ್ನಿಸುವ ನೆಪದಲ್ಲಿ ಮಾತುಕತೆ ನಡೆಸಿ ನಾಲ್ಕು ನಿಮಿಷಗಳ ಕಾಲ ಸಮಯ ವ್ಯರ್ಥ ಮಾಡಿದರು. ಬಳಿಕ ಪತಿರಾನಗೆ ಬೌಲಿಂಗ್ ಗೆ ಅವಕಾಶ ನೀಡಲಾಯಿತು. ಧೋನಿಯ ಈ  ವರ್ತನೆ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

ಮುಂದಿನ ಸುದ್ದಿ
Show comments