ಟೀಂ ಇಂಡಿಯಾದಲ್ಲಿ ಸ್ಥಾನ ಸಿಗಬೇಕಿದ್ದರೆ ಧೋನಿ ಈ ಕೆಲಸ ಮಾಡಲೇಬೇಕು!

Webdunia
ಶುಕ್ರವಾರ, 14 ಡಿಸೆಂಬರ್ 2018 (09:34 IST)
ರಾಂಚಿ: ಸೀಮಿತ ಓವರ್ ಗಳ ವಿಕೆಟ್ ಕೀಪರ್ ಧೋನಿ ಇದೀಗ ಟೀಂ ಇಂಡಿಯಾದಿಂದ ಬ್ರೇಕ್ ನಲ್ಲಿದ್ದು, ಅವರು ಮತ್ತೆ ತಂಡಕ್ಕೆ ಆಯ್ಕೆಯಾಗಬೇಕಾದರೆ ದೇಶೀಯ ಕ್ರಿಕೆಟ್ ಆಡಲೇಬೇಕು ಎಂಬ ಒತ್ತಾಯಗಳು ಹೆಚ್ಚುತ್ತಿವೆ.


ಧೋನಿ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೂ ಆಯ್ಕೆಯಾಗಿರಲಿಲ್ಲ. ಅವರ ಬ್ಯಾಟಿಂಗ್ ಫಾರ್ಮ್ ಬಗ್ಗೆ ಟೀಕೆ ಕೇಳಿಬರುತ್ತಿದೆ. ಹೀಗಾಗಿ ಅವರು ತಂಡಕ್ಕೆ ಮತ್ತೆ ಆಯ್ಕೆಯಾಗಬೇಕಾದರೆ ರಣಜಿ ಟ್ರೋಫಿಯಂತಹ ದೇಶೀಯ ಕ್ರಿಕೆಟ್ ನಲ್ಲಿ ಆಡಿ ತಮ್ಮ ಫಾರ್ಮ್ ಸಾಬೀತುಪಡಿಸಬೇಕು ಎಂದು ಮಾಜಿ ಕ್ರಿಕೆಟಿಗ ಮೊಹಿಂದರ್ ಅಮರನಾಥ್ ಒತ್ತಾಯಿಸಿದ್ದಾರೆ.

ಇದಕ್ಕೂ ಮೊದಲು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಧೋನಿ ಜತೆಗೆ ಕಳಪೆ ಫಾರ್ಮ್ ನಿಂದ ತಂಡಕ್ಕೆ ಆಯ್ಕೆಯಾಗದ ಇನ್ನೊಬ್ಬ ಕ್ರಿಕೆಟಿಗ ಶಿಖರ್ ಧವನ್ ಕೂಡಾ ರಣಜಿಯಲ್ಲಿ ಆಡಿ ಸಾಮರ್ಥ್ಯ ಸಾಬೀತುಪಡಿಸಬೇಕು. ಬೇರೆ ಕ್ರಿಕೆಟಿಗರಿಗೆ ಅನ್ವಯವಾಗುವ ನಿಯಮ ಇವರಿಗೂ ಅನ್ವಯವಾಗಬೇಕು ಎಂದು ಈ ಹಿರಿಯ ಕ್ರಿಕೆಟಿಗರು ಒತ್ತಾಯಿಸಿದ್ದಾರೆ.

ಈ ಹಿಂದೆ ಆಯ್ಕೆ ಸಮಿತಿ ಕೂಡಾ ಧೋನಿಗೆ ದೇಶೀಯ ಕ್ರಿಕೆಟ್ ನಲ್ಲಿ ಆಡಲು ಸೂಚಿಸಿತ್ತಾದರೂ, ಧೋನಿ ಅದನ್ನು ಕಡೆಗಣಿಸಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments