Publish Date: Mon, 04 Jun 2018 (08:47 IST)
Updated Date: Mon, 04 Jun 2018 (08:49 IST)
ಮುಂಬೈ: ಧೋನಿ ಎಂದರೆ ಟೀಂ ಇಂಡಿಯಾದ ಯುವ ಕ್ರಿಕೆಟಿಗರಿಗೆಲ್ಲಾ ಆದರ್ಶ, ಹಾಗೇ ದೊಡ್ಡಣ್ಣನ ಹಾಗೆ. ಆದರೆ ಯುವ ಕ್ರಿಕೆಟಿಗರು ತಮಗೆ ನೀಡುವ ಅತಿಯಾದ ಗೌರವ ಧೋನಿಗೆ ಮುಜುಗರವುಂಟು ಮಾಡುತ್ತದಂತೆ.
ಅಂತಹವರಲ್ಲಿ ಯಜುವೇಂದ್ರ ಚಾಹಲ್ ಒಬ್ಬರು. ಯುವ ಸ್ಪಿನ್ನರ್ ಆಗಾಗ ತಮ್ಮ ಯಶಸ್ಸಿಗೆ ಧೋನಿ ಕಾರಣ ಎಂದು ಕ್ರೆಡಿಟ್ ಕೊಡುತ್ತಾರೆ. ಆದರೆ ತಾವು ಮೊದಲ ಬಾರಿಗೆ ಧೋನಿಯನ್ನು ಭೇಟಿಯಾದಾಗ ಅವರು ಹೇಳಿದ ಮಾತೊಂದನ್ನು ಚಾಹಲ್ ಇಂದಿಗೂ ನೆನಪಿಸಿಕೊಳ್ಳುತ್ತಾರೆ.
‘ಮೊದಲ ಬಾರಿಗೆ ಜಿಂಬಾಬ್ವೆ ಸರಣಿಗೆ ಆಯ್ಕೆಯಾದಾಗ ಧೋನಿ ನನಗೆ ಕ್ಯಾಪ್ ನೀಡಿದ್ದರು. ಮೊದಲ ಬಾರಿಗೆ ಅವರೆದುರು ನಿಂತಾಗ ಏನು ಮಾತನಾಡಬೇಕೆಂದು ತಿಳಿಯದೆ ನಿಂತೆ. ಅವರನ್ನು ಮಹಿ ಸರ್ ಎಂದು ಸಂಬೋಧಿಸುತ್ತಿದ್ದೆ. ಆದರೆ ಕೆಲವು ಸಮಯದ ನಂತರ ಅವರು ನನ್ನನ್ನು ಕರೆದು.. ನೋಡು.. ನನ್ನನ್ನು ಮಹಿ, ಮಹೇಂದ್ರ ಸಿಂಗ್ ಧೋನಿ, ಧೋನಿ, ಬಾಯಿ.. ಹೀಗೆ ಏನು ಬೇಕಾದರೂ ಹೇಳು. ಆದರೆ ಸರ್ ಎಂದು ಮಾತ್ರ ಹೇಳಬೇಡ ಎಂದರು’ ಎಂದು ಚಾಹಲ್ ಸಂದರ್ಶನವೊಂದರಲ್ಲಿ ಸ್ಮರಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.