ದಕ್ಷಿಣ ಆಫ್ರಿಕಾ ವಿರುದ್ಧದ 72 ದಿನಗಳ ಸುದೀರ್ಘ ಪ್ರವಾಸಕ್ಕಾಗಿ ಬಿಸಿಸಿಐ ಭಾರತ ಕ್ರಿಕೆಟ್ ತಂಡO ಆಟಗಾರರನ್ನು ಪ್ರಕಟಿಸಿದೆ.
ನಿರೀಕ್ಷೆಯಂತೆ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡದಿದ್ದರೂ ಕರ್ನಾಟಕದ ಶ್ರೀಕಾಂತ್ ಅರವಿಂದ್ ಮತ್ತು ಪಂಜಾಬ್ನ ಆಲ್ರೌಂಡರ್ ಗುರುಕೀರತ್ ಸಿಂಗ್ ಮಾನ್ ಅವರನ್ನು ಕ್ರಮವಾಗಿ ಟಿ20 ಮತ್ತು ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಭಾರತ ಕ್ರಿಕೆಟ್ ತಂಡ ನಾಯಕ ಎಂ.ಎಸ್ ಧೋನಿ ನೇತೃತ್ವದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರಿಂದ ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೇಯ ಉದ್ಭವಿಸುವುದಿಲ್ಲ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಸಂದೀಪ್ ಪಾಟೀಲ್ ಹೇಳಿದ್ದಾರೆ.
ತಂಡಗಳು:
ಟಿ20 ತಂಡ: ಎಂ.ಎಸ್.ಧೋನಿ(ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸುರೇಶ್ ರೈನಾ, ಅಜಿಂಕ್ಯ ರೆಹಾನೆ, ಸ್ಟುವರ್ಟ್ ಬಿನ್ನಿ, ಆರ್.ಅಶ್ವಿನ್, ಅಕ್ಷರ್ ಪಟೇಲ್, ಹರಭಜನ್ ಸಿಂಗ್, ಭುವನೇಶ್ವರ್ ಕುಮಾರ್, ಮೋಹಿತ್ ಶರ್ಮಾ, ಅಮಿತ್ ಮಿಶ್ರಾ, ಎಸ್.ಅರವಿಂದ್.
ಏಕದಿನ ಪಂದ್ಯ: ಎಂ.ಎಸ್.ಧೋನಿ(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಂಬಾಟಿ ರಾಯಡು, ಸುರೇಶ್ ರೈನಾ, ಅಜಿಂಕ್ಯ ರೆಹಾನಾ, ಸ್ಟುವರ್ಟ್ ಬಿನ್ನಿ, ಆರ್.ಅಶ್ವಿನ್, ಅಕ್ಷರ್ ಪಟೇಲ್, ಗುರುಕೀರತ್ ಮಾನ್, ಅಮಿತ್ ಮಿಶ್ರಾ, ಭುವನೇಶ್ವರ್ ಕುಮಾರ್, ಮೋಹಿತ್ ಶರ್ಮಾ ಮತ್ತು ಉಮೇಶ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ.