Webdunia - Bharat's app for daily news and videos

Install App

MS Dhoni: ಮೈಸೂರು ಸ್ಯಾಂಡಲ್ ರಾಯಭಾರಿಯಾಗಿದ್ದ ಧೋನಿ: ಆಗಲೂ ಆಗಿತ್ತು ವಿವಾದ

Krishnaveni K
ಶನಿವಾರ, 24 ಮೇ 2025 (09:36 IST)
ಬೆಂಗಳೂರು: ತಮನ್ನಾ ಭಾಟಿಯಾರನ್ನು ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನೇಮಕ ಮಾಡಿರುವ ಸರ್ಕಾರದ ನಿರ್ಧಾರ ಈಗ ಚರ್ಚೆಗೆ ಕಾರಣವಾಗಿದೆ. ಆದರೆ ಈ ಹಿಂದೆ ಧೋನಿಯೂ ಮೈಸೂರು ಸ್ಯಾಂಡಲ್ ರಾಯಭಾರಿಯಾಗಿದ್ದರು. ಆಗಲೂ ವಿವಾದವಾಗಿತ್ತು.

ಮೈಸೂರು ಸ್ಯಾಂಡಲ್ ನ್ನು ರಾಷ್ಟ್ರೀಯ ಮಾರುಕಟ್ಟೆಗೆ ವಿಸ್ತರಿಸಲು ಪರಭಾಷಾ ನಾಯಕಿಯನ್ನು ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ ಎಂದು ಸಚಿವ ಎಂಬಿ ಪಾಟೀಲ್ ಸಮಜಾಯಿಷಿ ನೀಡಿದ್ದಾರೆ.

ಈ ಹಿಂದೆ 2006 ರಲ್ಲಿ ಆಗ ಭಾರತೀಯ ಕ್ರಿಕೆಟ್ ನಲ್ಲಿ ಮಿಂಚುತ್ತಿದ್ದ ಕ್ರಿಕೆಟಿಗ ಎಂಎಸ್ ಧೋನಿಯನ್ನು ಕೆಎಸ್ ಡಿಎಲ್ ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನೇಮಕ ಮಾಡಿತ್ತು. ಧೋನಿ ರಾಯಭಾರಿಯಾಗಿದ್ದಕ್ಕೆ ಕನ್ನಡಿಗರಿಂದ ಆಕ್ಷೇಪವಿರಲಿಲ್ಲ. ಬದಲಾಗಿ ಖುಷಿಪಟ್ಟಿದ್ದರು.

ಆದರೆ ಧೋನಿ ಬಳಿಕ ಕ್ರಿಕೆಟ್ ಜಗತ್ತಿನಲ್ಲಿ ಖ್ಯಾತಿ ಹೆಚ್ಚಿಸಿಕೊಂಡರು. ನೂರಾರು ಕೋಟಿ ಒಪ್ಪಂದಗಳ ಉತ್ಪನ್ನಗಳು ಅವರನ್ನು ಹುಡುಕಿಕೊಂಡು ಬರುತ್ತಿತ್ತು. ಇದರ ನಡುವೆ ಅವರು ಮೈಸೂರು ಸ್ಯಾಂಡಲ್ ಸೋಪ್ ಗೆ ಕೊಡಬೇಕಾದ ಸಮಯ ಕೊಡಲಿಲ್ಲ. ಹೀಗಾಗಿ 2007 ರಲ್ಲಿ ಅವರೊಂದಿಗಿನ ಒಪ್ಪಂದ ಕಡಿತ ಮಾಡಲಾಯಿತು. ಇದರಿಂದಾಗಿ ಧೋನಿ ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ಈಗ ಮತ್ತೊಬ್ಬ ಪರಭಾಷಾ ಸ್ಟಾರ್ ಈ ಸೋಪ್ ನ ರಾಯಭಾರಿಯಾಗಿದ್ದಾರೆ. ಆದರೆ ಅವರನ್ನು ನೇಮಕ ಮಾಡಿರುವುದಕ್ಕೆ ಕನ್ನಡ ಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ತವರಿನಾಚೆ ಆರ್‌ಸಿಬಿ ತಂಡಕ್ಕೆ ಮೊದಲ ಸೋಲು: ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಬೆಂಗಳೂರು

RCB vs SRH: ಟಾಸ್ ಗೆದ್ದ ಆರ್‌ಸಿಬಿ, ಗುಜರಾತ್‌ನ್ನು ಹಿಂದಿಕ್ಕುವ ಗುರಿ

ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿರಾಟ್, ರೋಹಿತ್ ಅನುಪಸ್ಥಿತಿ ನಿಭಾಯಿಸುವುದು ದೊಡ್ಡ ಸವಾಲು ಎಂದ ಗಂಭೀರ್‌

India New Test Captain: ಹರಿದಾಡುತ್ತಿರುವ ಹೆಸರುಗಳಲ್ಲಿ ಇವರೇ ನಾಯಕನಾಗುವುದು ಪಕ್ಕಾ ಅಂತೇ

RCB vs SRH match: ಆರ್ ಸಿಬಿಗೆ ಇಂದು ಮರಳಿ ನಂ1 ಪಟ್ಟಕ್ಕೇರುವುದೇ ಗುರಿ

ಮುಂದಿನ ಸುದ್ದಿ
Show comments