ಟೀಂ ಇಂಡಿಯಾ ವಿರುದ್ಧ ಮೋಸದಾಟ ಆರೋಪ: ಹರ್ಷಿತ್ ರಾಣಾ ಸೇರ್ಪಡೆಗೆ ಇಂಗ್ಲೆಂಡ್ ಆಕ್ಷೇಪ

Krishnaveni K
ಶನಿವಾರ, 1 ಫೆಬ್ರವರಿ 2025 (09:31 IST)
ಪುಣೆ: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದರೂ ಇಂಗ್ಲೆಂಡ್ ತಂಡದಿಂದ ಮೋಸದಾಟ ಆರೋಪ ಕೇಳಿಬಂದಿದೆ.

ನಿನ್ನೆ ನಡೆದ ಪಂದ್ಯವನ್ನು ಟೀಂ ಇಂಡಿಯಾ 15 ರನ್ ಗಳಿಂದ ಗೆಲ್ಲುವ ಮೂಲಕ ಸರಣಿಯ ವಶ ಮಾಡಿಕೊಂಡಿದೆ. ಆದರೆ ಈ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಕಣಕ್ಕಿಳಿದಿದ್ದ ಹರ್ಷಿತ್ ರಾಣಾ ತಂಡದ ಚಿತ್ರಣವನ್ನೇ ಬದಲಿಸಿದ್ದು ಇಂಗ್ಲೆಂಡ್ ಮೋಸದಾಟದ ಆರೋಪ ಮಾಡಿದೆ.

ಬ್ಯಾಟಿಂಗ್ ಮಾಡುತ್ತಿದ್ದಾಗ ಟೀಂ ಇಂಡಿಯಾ ಬ್ಯಾಟಿಗ ಶಿವಂ ದುಬೆ ತಲೆಗೆ ಚೆಂಡು ಬಡಿದಿತ್ತು. ಹೀಗಾಗಿ ಅವರು ಫೀಲ್ಡಿಂಗ್ ಗಿಳಿದಿರಲಿಲ್ಲ. ಹೀಗಾಗಿ ಟೀಂ ಇಂಡಿಯಾ ಕನ್ಕ್ಯುಶನ್ ಸಬ್ ಆಟಗಾರನಿಗೆ ಮನವಿ ಮಾಡಿತು. ಸಾಮಾನ್ಯವಾಗಿ ಈ ರೀತಿ ಬದಲಿ ಆಟಗಾರನನ್ನು ಸೇರ್ಪಡೆಗೊಳಿಸುವುದಿದ್ದರೆ ಬ್ಯಾಟರ್ ನ ಬದಲು ಬ್ಯಾಟರ್, ಬೌಲರ್ ಗಾಯಗೊಂಡಿದ್ದರೆ ಆ ಸ್ಥಾನಕ್ಕೆ ಬೌಲರ್ ನನ್ನೇ ಆಯ್ಕೆ ಮಾಡಬೇಕು.

ಆದರೆ ಟೀಂ ಇಂಡಿಯಾ ಹರ್ಷಿತ್ ರಾಣಾರನ್ನು ಕರೆತಂದಿದೆ. ಇದೀಗ ಇಂಗ್ಲೆಂಡ್ ತಂಡದ ಆಕ್ಷೇಪಕ್ಕೆ ಗುರಿಯಾಗಿದೆ. ಬ್ಯಾಟರ್ ನ ಬದಲಿಗೆ ಪರಿಪೂರ್ಣ ಬೌಲರ್ ನನ್ನು ಆಯ್ಕೆ ಮಾಡಿದ್ದು ಸರಿಯಲ್ಲ ಎಂದು ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಅಸಮಾಧಾನ ಹೊರಹಾಕಿದ್ದಾರೆ. ಆಟಗಾರನನ್ನು ಅನುಮತಿಸುವ ಮುನ್ನ ರೆಫರಿಗೂ ಸ್ಪಷ್ಟತೆಯಿರಬೇಕು ಎಂದು ಕಿಡಿ ಕಾರಿದ್ದಾರೆ. ಬದಲಿಯಾಗಿ ಕಣಕ್ಕಿಳಿದಿದ್ದ ಹರ್ಷಿತ್ ರಾಣಾ 4 ಓವರ್ ಗಳಲ್ಲಿ 33 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

IPL 2026: ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿಗೆ ಮಾಜಿ ಮಾಲೀಕ ವಿಜಯ್‌ ಮಲ್ಯರಿಂದ ವಿಶ್‌

ಮುಂದಿನ ಸುದ್ದಿ
Show comments