Webdunia - Bharat's app for daily news and videos

Install App

ಭಾರತ-ಇಂಗ್ಲೆಂಡ್ ತೃತೀಯ ಟಿ20 ಪಂದ್ಯ ಇಂದು

Webdunia
ಮಂಗಳವಾರ, 16 ಮಾರ್ಚ್ 2021 (09:21 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ತೃತೀಯ ಟಿ20 ಪಂದ್ಯ ನಡೆಯಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಉಭಯ ತಂಡಗಳೂ ಒಂದೊಂದು ಪಂದ್ಯ ಗೆದ್ದಿದೆ.

 

ಕಳೆದ ಪಂದ್ಯದಲ್ಲಿ ಗೆದ್ದ ಉತ್ಸಾಹದಲ್ಲಿ ಟೀಂ ಇಂಡಿಯಾ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಹಾಗಿದ್ದರೂ ಪ್ರತೀ ಪಂದ್ಯದಲ್ಲಿ ಟೀಂ ಇಂಡಿಯಾ ಗಮನಾರ್ಹ ಬದಲಾವಣೆಯೊಂದಿಗೇ ಕಣಕ್ಕಿಳಿಯುತ್ತಿದೆ. ಕಳೆದ ಪಂದ್ಯದಲ್ಲಿ ಇಶಾನ್ ಕಿಶಾನ್ ಮತ್ತು ಸೂರ್ಯಕುಮಾರ್ ಯಾದವ್ ಪದಾರ್ಪಣೆ ಮಾಡಿದ್ದರು. ಈ ಪೈಕಿ ಇಶಾನ್ ಸಿಕ್ಕ ಅವಕಾಶವನ್ನು ಬಳಸಿಕೊಂಡಿದ್ದರು. ಸೂರ್ಯಕುಮಾರ್ ಯಾದವ್ ಗೆ ಬ್ಯಾಟಿಂಗ್ ಗೆ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಈ ಇಬ್ಬರೂ ಮತ್ತೆ ಇಂದಿನ ಪಂದ್ಯವಾಡಬಹುದು.

ಅದರ ಹೊರತಾಗಿ ರೋಹಿತ್ ಶರ್ಮಾ ಈ ಪಂದ್ಯಕ್ಕೆ ಕಮ್ ಬ್ಯಾಕ್ ಮಾಡಬಹುದಾಗಿದ್ದು, ಕೆಎಲ್ ರಾಹುಲ್ ಹೊರಗುಳಿಯುವ ಸಾಧ‍್ಯತೆಯಿದೆ. ಬೌಲಿಂಗ್ ನಲ್ಲಿ ಮೊಹಮ್ಮದ್ ಸಿರಾಜ್ ಗೆ ಒಂದು ಅವಕಾಶ ಸಿಕ್ಕರೂ ಅಚ್ಚರಿಯಿಲ್ಲ. ಪಂದ್ಯ ಭಾರತೀಯ ಕಾಲಮಾನ ಪ್ರಕಾರ 7 ಗಂಟೆಗೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments