Webdunia - Bharat's app for daily news and videos

Install App

ಮಳೆ ಬಂದು ಮ್ಯಾಚ್ ಕೊಚ್ಕೊಂಡು ಹೋಗಲಿ ಎಂದು ಕಾಯ್ತಿದ್ದಾರೆ ಫ್ಯಾನ್ಸ್

Krishnaveni K
ಶುಕ್ರವಾರ, 18 ಅಕ್ಟೋಬರ್ 2024 (08:29 IST)
Photo Credit: X
ಬೆಂಗಳೂರು: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತದ ಪರಿಸ್ಥಿತಿ ಹೀನಾಯವಾಗಿದೆ. ಇದೀಗ ಫ್ಯಾನ್ಸ್ ಮಳೆಯೇ ಕಾಪಾಡಬೇಕು ಎಂದು ಮೊರೆಯಿಡುತ್ತಿದ್ದಾರೆ.

ಚಿನ್ನಸ್ವಾಮಿ ಮೈದಾನದಲ್ಲಿ ಮಳೆ ಭೀತಿಯ ನಡುವೆಯೇ ಪಂದ್ಯ ನಡೆಯುತ್ತಿದೆ. ಮೊದಲ ದಿನದಾಟ ಮಳೆಗೆ ಸಂಪೂರ್ಣ ಆಹುತಿಯಾಗಿತ್ತು. ಆದರೆ ಎರಡನೇ ದಿನ ಪಂದ್ಯ ಆರಂಭವಾಗಿತ್ತು. ಆದರೆ ಎರಡನೇ ದಿನಕ್ಕೆ ಮಳೆ ಯಾಕೆ ನಿಂತಿತೋ ಎಂದು ಅಭಿಮಾನಿಗಳು ಹಿಡಿಶಾಪ ಹಾಕುವಂತಾಗಿದೆ ಭಾರತದ ಪರಿಸ್ಥಿತಿ.

ಮೊದಲ ಇನಿಂಗ್ಸ್ ನಲ್ಲಿ 46 ರನ್ ಗೆ ಆಲೌಟ್ ಆಗಿದ್ದ ಭಾರತ ಹೀನಾಯ ದಾಖಲೆ ಮಾಡಿದೆ. ಇನ್ನೊಂದೆಡೆ ನ್ಯೂಜಿಲೆಂಡ್ ಭರ್ಜರಿ ಬ್ಯಾಟಿಂಗ್ ಮಾಡುತ್ತಿದೆ. ಇದರಿಂದಾಗಿ ಈಗಾಗಲೇ ನ್ಯೂಜಿಲೆಂಡ್ ಮುನ್ನಡೆ 150 ಪ್ಲಸ್ ರನ್ ಗೆ ಬಂದು ನಿಂತಿದೆ. ಇದರಿಂದ ಭಾರತ ಸಂಕಷ್ಟಕ್ಕೆ ಸಿಲುಕಿದೆ.

ಹೀಗಾಗಿ ಈಗ ಅಭಿಮಾನಿಗಳು ಮಳೆಯೇ ಭಾರತ ತಂಡವನ್ನು ಕಾಪಾಡಬೇಕು ಎಂದು ಮೊರೆಯಿಡುತ್ತಿದ್ದಾರೆ. ಇಂದೂ ಭಾರೀ ಮಳೆಯಾಗಲಿ ಇದರಿಂದಾದರೂ ಭಾರತ ಹೀನಾಯ ಸೋಲು ಕಾಣುವುದು ತಪ್ಪುತ್ತದೆ ಎಂದು ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments