ಹಿಂದೂ ಹಬ್ಬಕ್ಕೆ ಮಾತ್ರ ಪುಕ್ಸಟೆ ಸಲಹೆ ಕೊಡ್ತೀರಾ?! ರೋಹಿತ್ ಶರ್ಮಾಗೆ ನೆಟ್ಟಿಗರ ಟೀಕೆ

Webdunia
ಬುಧವಾರ, 8 ಮಾರ್ಚ್ 2023 (08:30 IST)
ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೋಳಿ ಹಬ್ಬದಂದು ಪ್ರಾಣಿಗಳ ಮೇಲೆ ಬಣ್ಣದ ನೀರೆರಚಿ ಅವುಗಳಿಗೆ ಕಿರುಕುಳ ಕೊಡಬೇಡಿ ಎಂದು ಸಲಹೆ ಕೊಟ್ಟಿದ್ದು ಈಗ ಅವರಿಗೇ ತಿರುಗುಬಾಣವಾಗಿದೆ.

ಹೋಳಿ ಹಬ್ಬದ ಶುಭಾಷಯ ಕೋರಿ ಟ್ವೀಟ್ ಮಾಡಿದ್ದ ರೋಹಿತ್ ಶರ್ಮಾ ಕೊನೆಗೆ ‘ಹೋಳಿ ಭರ್ಜರಿಯಾಗಿ ಆಡಿ ಆದರೆ ಬೀದಿ ನಾಯಿಗಳಿಗೆ ತೊಂದರೆ ಕೊಡಬೇಡಿ’ ಎಂದು ಸಲಹೆ ನೀಡಿದ್ದರು. ಇದು ಕೆಲವು ವರ್ಗದ ಅಭಿಮಾನಿಗಳನ್ನು ಕೆರಳಿಸಿದೆ.

ಈ ಹಿಂದೆಯೂ ರೋಹಿತ್ ಶರ್ಮಾ ಹಿಂದೂ ಹಬ್ಬವಾದ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಡೆಯಬೇಡಿ, ಶಬ್ಧ ಮಾಲಿನ್ಯವಾಗುತ್ತದೆ, ಪ್ರಾಣಿಗಳಿಗೆ ಹಿಂಸೆಯಾಗುತ್ತದೆ ಎಂದಿದ್ದರು. ಹೋಳಿ ಹಬ್ಬದ ಸಂದರ್ಭದಲ್ಲಿಯೂ ಇದೇ ರೀತಿ ಮನವಿ ಮಾಡಿದ್ದರು.

ಆದರೆ ಹೀಗೆ ಹಿಂದೂ ಹಬ್ಬದ ಸಂದರ್ಭದಲ್ಲಿ ಮಾತ್ರವೇ ನಿಮಗೆ ಪ್ರಾಣಿ ಹಿಂಸೆ ನೆನಪಾಗುತ್ತದೆ. ಮುಸ್ಲಿಮರ ಬಕ್ರೀದ್ ವೇಳೆ ಪ್ರಾಣಿ ಹಿಂಸೆ ನೆನಪಾಗುವುದಿಲ್ಲವೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

ಮುಂದಿನ ಸುದ್ದಿ
Show comments