Webdunia - Bharat's app for daily news and videos

Install App

ಟಿ20 ವಿಶ್ವಕಪ್ ಗೆ ರಿಷಬ್ ಪಂತ್: ಸಂಜು ಸ್ಯಾಮ್ಸನ್ ಏನು ತಪ್ಪು ಮಾಡಿದ್ದಾರೆ ಎಂದು ಫ್ಯಾನ್ಸ್ ಆಕ್ರೋಶ

Krishnaveni K
ಬುಧವಾರ, 10 ಏಪ್ರಿಲ್ 2024 (10:18 IST)
Photo Courtesy: Twitter
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಅಂತಿಮ ಬಳಗ ಬಹುತೇಕ ಫೈನಲೈಸ್ ಆಗುತ್ತಿದೆ. ಈ ನಡುವೆ ರಿಷಬ್ ಪಂತ್ ರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತ ಎಂಬ ಸುದ್ದಿ ಓಡಾಡುತ್ತಿದೆ.

ಇದು ಸಂಜು ಸ್ಯಾಮ್ಸನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಐಪಿಎಲ್ ನಲ್ಲಿ ಸಂಜು ಸ್ಯಾಮ್ಸನ್ ನಾಯಕನಾಗಿ ಮತ್ತು ಆಟಗಾರನಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಇದುವರೆಗೆ ಸ್ಯಾಮ್ಸನ್ ಗೆ ಟೀಂ ಇಂಡಿಯಾದಲ್ಲಿ ಸರಿಯಾಗಿ ಅವಕಾಶ ಕೊಡದೇ ವಂಚಿಸಲಾಗುತ್ತಿದೆ ಎಂಬುದು ಅವರ ಅಭಿಮಾನಿಗಳ ಆರೋಪ.

ಇದೀಗ ಟಿ20 ವಿಶ್ವಕಪ್ ತಂಡಕ್ಕೂ ಸ್ಯಾಮ್ಸನ್ ಗೆ ಅವಕಾಶ ನೀಡದೇ ಸಾಧಾರಣ ಪ್ರದರ್ಶನ ನೀಡುತ್ತಿರುವ ರಿಷಬ್ ಪಂತ್ ಗೆ ಅವಕಾಶ ನೀಡುತ್ತಿರುವುದು ಅಭಿಮಾನಿಗಳ ಕೆಂಗಣ‍್ಣಿಗೆ ಗುರಿಯಾಗಿದೆ. ಒಂದು ವರ್ಷದ ಬಳಿಕ ಕ್ರಿಕೆಟ್ ಗೆ ಕಮ್ ಬ್ಯಾಕ್ ಮಾಡಿದ ರಿಷಬ್ ಈ ಐಪಿಎಲ್ ನಲ್ಲಿ ಇದುವರೆಗೆ ಹೇಳಿಕೊಳ್ಳುವ ಪ್ರದರ್ಶನ ನೀಡಿಲ್ಲ.

ಹೇಗಿದ್ದರೂ ವಿಕೆಟ್ ಕೀಪರ್ ಆಗಿ ಇಬ್ಬರಿಗೆ ಅವಕಾಶ ನೀಡಬಹುದಾಗಿದೆ. ಹೀಗಿದ್ದಲ್ಲಿ ಕೆಎಲ್ ರಾಹುಲ್, ಜಿತೇಶ್ ಶರ್ಮಾ ಮೊದಲಾದವರ ಬದಲು ರಿಷಬ್ ಪಂತ್ ಜೊತೆಗೆ ಸಂಜು ಸ್ಯಾಮ್ಸನ್ ಗೆ ಎರಡನೇ ವಿಕೆಟ್ ಕೀಪರ್ ಆಗಿ ಅವಕಾಶ ಕೊಡಿ ಎಂಬುದು ಅಭಿಮಾನಿಗಳ ಒತ್ತಾಯ. ಆಯ್ಕೆ ಸಮಿತಿ ಅಂತಿಮವಾಗಿ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಮುಂದಿನ ಸುದ್ದಿ
Show comments