Publish Date: Sun, 20 Nov 2022 (18:41 IST)
Updated Date: Sun, 20 Nov 2022 (18:42 IST)
ಬೇ ಓವಲ್: ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ದ್ವಿತೀಯ ಟಿ20 ಪಂದ್ಯದಲ್ಲೂ ಪ್ರತಿಭಾವಂತ ವಿಕೆಟ್ ಕೀಪರ್ ಬ್ಯಾಟಿಗ ಸಂಜು ಸ್ಯಾಮ್ಸನ್ ರನ್ನು ಕಡೆಗಣಿಸಿರುವುದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಸಂಜು ಸ್ಯಾಮ್ಸನ್ ರನ್ನು ಪದೇ ಪದೇ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಕಡೆಗಣಿಸುತ್ತಲೇ ಇರುತ್ತದೆ. ಇದೀಗ ಪ್ರಮುಖರ ಅನುಪಸ್ಥಿತಿಯಲ್ಲಾದರೂ ಅವರನ್ನು ಆಡಿಸಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು.
ಆದರೆ ಈ ಪಂದ್ಯದಲ್ಲೂ ವಾಷಿಂಗ್ಟನ್ ಸುಂದರ್, ದೀಪಕ್ ಹೂಡಾ, ರಿಷಬ್ ಪಂತ್ ಗೇ ಮಣೆ ಹಾಕಲಾಗಿದೆ ಹೊರತು ಸಂಜು ಸ್ಯಾಮ್ಸನ್ ರನ್ನು ಕಡೆಗಣಿಸಲಾಗಿದೆ. ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಜು ಏನು ಅನ್ಯಾಯ ಮಾಡಿದ್ದಾರೆ ಎಂದು ಈ ಶಿಕ್ಷೆ ಎಂದು ಕಿಡಿ ಕಾರಿದ್ದಾರೆ.