Webdunia - Bharat's app for daily news and videos

Install App

ಆಪತ್ ಬಾಂಧವನನ್ನೇ ಕೈ ಬಿಟ್ರಲ್ಲಾ..! ಕೆಎಲ್ ರಾಹುಲ್ ಕಿತ್ತು ಹಾಕಿದ್ದಕ್ಕೆ ಫ್ಯಾನ್ಸ್ ಆಕ್ರೋಶ

Krishnaveni K
ಬುಧವಾರ, 1 ಮೇ 2024 (10:34 IST)
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಕೆಎಲ್ ರಾಹುಲ್ ಗೆ ಕೊಕ್ ನೀಡಿರುವ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಕೆಎಲ್ ರಾಹುಲ್ ಅನೇಕ ಬಾರಿ ಭಾರತ ತಂಡಕ್ಕೆ ಆಪತ್ ಬಾಂಧವನೆಂತೆ ಆಡಿದ್ದಾರೆ. ಅಷ್ಟೇ ಯಾಕೆ, ಇತ್ತೀಚೆಗೆ ಏಕದಿನ ವಿಶ್ವಕಪ್ ಫೈನಲ್ ನಲ್ಲೂ ಉಳಿದೆಲ್ಲಾ ಬ್ಯಾಟಿಗರು ವಿಫಲರಾಗಿದ್ದಾಗ ರಾಹುಲ್ ಏಕಾಂಗಿಯಾಗಿ ಹೋರಾಡಿ ತಂಡಕ್ಕೆ ಗೌರವಯುತ ಮೊತ್ತ ಕೊಡಿಸಿದ್ದರು.

ಕಳೆದ ಏಕದಿನ ವಿಶ್ವಕಪ್ ನಲ್ಲಿ ವಿಕೆಟ್ ಕೀಪರ್ ಆಗಿ ಅವರ ಜಾಣ್ಮೆ, ಬ್ಯಾಟಿಗನಾಗಿ ಅವರ ಆಟ ಭಾರತೀಯ ಅಭಿಮಾನಿಗಳು ಯಾವತ್ತೂ ಮರೆಯುವಂತಿಲ್ಲ. ಆದರೆ ಇದೀಗ ಟಿ20 ವಿಶ್ವಕಪ್ ಗೆ ಅವರನ್ನು ಕಡೆಗಣಿಸಿ ಫಾರ್ಮ್ ನಲ್ಲಿಲ್ಲದ ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಿದ್ದು ಎಲ್ಲರ ಆಕ್ರೋಶ ವ್ಯಕ್ತವಾಗಿದೆ.

ಕೆಎಲ್ ರಾಹುಲ್ ಟೀಂ ಇಂಡಿಯಾದ ಹಿರಿಯ ಆಟಗಾರ. ಅವರಿಗೆ ಅಪಾರ ಅನುಭವವಿದೆ. ಅವರನ್ನು ತಂಡದಿಂದ ಕೈ ಬಿಟ್ಟಿದ್ದರಿಂದ ತಂಡಕ್ಕೆ ದೊಡ್ಡ ನಷ್ಟವಾಗಿದೆ ಎಂಬುದು ಫ್ಯಾನ್ಸ್ ಅಭಿಪ್ರಾಯವಾಗಿದೆ. ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡಿರುವುದು ಓಕೆ, ಆದರೆ ರಾಹುಲ್ ರಂತಹ ಉಪಯುಕ್ತ ಆಟಗಾರನನ್ನು ಕೈ ಬಿಟ್ಟಿರುವುದು ಮೂರ್ಖತನ ಎಂದು ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments