Webdunia - Bharat's app for daily news and videos

Install App

ಇಷ್ಟೆಲ್ಲಾ ಕಷ್ಟಗಳಿದ್ದರೂ ದೆಹಲಿಯಲ್ಲಿ ಟಿ20 ಪಂದ್ಯ ಆಯೋಜಿಸುವ ಜರೂರತ್ತೇನು?

Webdunia
ಗುರುವಾರ, 31 ಅಕ್ಟೋಬರ್ 2019 (09:18 IST)
ನವದೆಹಲಿ: ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ನವಂಬರ್ 3 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಟಿ20 ಪಂದ್ಯವಾಡಬೇಕಿದೆ. ಆದರೆ ಈ ಪಂದ್ಯ ನಡೆಸುವುದಕ್ಕೆ ಇದೀಗ ಹಲವೆಡೆಯಿಂದ ಅಪಸ್ವರ ಕೇಳಿಬಂದಿದೆ.


ಮೊದಲನೆಯದಾಗಿ ಇಲ್ಲಿ ಪಂದ್ಯ ನಡೆಸಲು ಕಳಪೆ ಮಟ್ಟದ ವಾತಾವರಣ ಕಾರಣ. ವಾಯು ಮಾಲಿನ್ಯದಿಂದಾಗಿ ಹೊಗೆಯುಕ್ತ ವಾತಾವರಣವಿದೆ. ಇಂತಹ ಸಂದರ್ಭದಲ್ಲಿ ಇಲ್ಲಿ ಪಂದ್ಯ ಆಯೋಜಿಸುವುದು ಆಟಗಾರರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ ಎನ್ನುವುದು ಪರಿಸರವಾದಿಗಳು, ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್, ಮಾಜಿ ಕ್ರಿಕೆಟಿಗ ಬಿಶನ್ ಸಿಂಗ್ ಬೇಡಿ ಅಭಿಪ್ರಾಯ. 

ಇನ್ನೊಂದೆಡೆ ದೆಹಲಿಯಲ್ಲಿ ಉಗ್ರರ ದಾಳಿಯ ಭೀತಿಯಿದೆ. ಈ ಭೀತಿ ಪಂದ್ಯದ ಮೇಲೂ ಆವರಿಸಿದೆ. ಈಗಾಗಲೇ ಕ್ರಿಕೆಟಿಗರಿಗೆ ಹೆಚ್ಚಿನ ಭದ್ರತೆ ನೀಡಲು ದೆಹಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇಷ್ಟೆಲ್ಲಾ ರಗಳೆಗಳ ನಡುವೆ ಇಲ್ಲಿ ಪಂದ್ಯ ಆಯೋಜಿಸುವುದರ ಬಗ್ಗೆ ಮರುಪರಿಶೀಲನೆ ಮಾಡಬೇಕು ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಒತ್ತಾಯ ಮಾಡಲಾಗುತ್ತಿದೆ. ಆದರೆ ಕೊನೆಯ ಕ್ಷಣದಲ್ಲಿ ಸ್ಥಳ ಬದಲಾವಣೆ ಕಷ್ಟವಾಗಿರುವುದರಿಂದ ಪಂದ್ಯ ಸ್ಥಳಾಂತರವಾಗುವುದು ಅನುಮಾನವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕ್ ನಲ್ಲೂ ಪೆವಿಲಿಯನ್ ನಲ್ಲಿ ಸಾಯಿ ಸುದರ್ಶನ್ ಗೆ ಇದೆಂಥಾ ಅಭ್ಯಾಸ

ಕರುಣ್ ನಾಯರ್ ವೃತ್ತಿ ಜೀವನ ಇಲ್ಲಿಗೇ ಕೊನೆಯಾಯ್ತಾ

Rishabh Pant: ಚೆಂಡು ಬಡಿದ ರಭಸಕ್ಕೆ ರಿಷಭ್ ಪಂತ್ ಪಾದದ ಗತಿ ಏನಾಗಿದೆ ನೋಡಿ: ವಿಡಿಯೋ

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡ ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments