ನ್ಯೂಜಿಲೆಂಡ್ ಟೆಸ್ಟ್ ಸೋಲು: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮಾತ್ರವಲ್ಲ, ಗಂಭೀರ್ ಗೂ ಗಂಡಾಂತರ

Krishnaveni K
ಸೋಮವಾರ, 4 ನವೆಂಬರ್ 2024 (16:11 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾದಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮಾತ್ರವಲ್ಲ, ಗೌತಮ್ ಗಂಭೀರ್ ಗೂ ಗಂಡಾಂತರ ಕಾದಿದೆ.

ಟೆಸ್ಟ್ ಸರಣಿ ಸೋಲಿನ ಬಳಿಕ ಗಂಭೀರ್ ಕೋಚ್ ಸ್ಥಾನದಿಂದ ಕಿತ್ತೊಗೆಯಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ. ಸದ್ಯಕ್ಕೆ ಇದು ಗಂಭೀರ್ ಕೋಚ್ ಆದ ಆರಂಭಿಕ ಅವಧಿಯಾಗಿದ್ದರಿಂದ ಅವರನ್ನು ವಜಾಗೊಳಿಸುವ ಸಾಧ್ಯತೆಯಂತೂ ಇಲ್ಲ. ಆದರೆ ಅವರಿಗಿದ್ದ ಕೆಲವೊಂದು ಪರಮಾಧಿಕಾರಗಳನ್ನು ಕಿತ್ತೊಗೆಯುವ ಸಾಧ್ಯತೆಯಿದೆ.

ಗೌತಮ್ ಗಂಭೀರ್ ಗೆ ತಂಡದ ಆಯ್ಕೆ ವಿಚಾರದಲ್ಲಿ ಇದ್ದ ಪರಮಾಧಿಕಾರಕ್ಕೆ ಕತ್ತರಿ ಬೀಳುವ ಸಾಧ್ಯತೆಯಿದೆ. ಗೌತಮ್ ಗಂಭೀರ್ ಬೇಡಿಕೆಯಿಟ್ಟಿದ್ದ ಸಹಾಯಕ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನೂ ನೀಡಿಯೂ ತಂಡ ವಿಫಲವಾಗಿರುವುದಕ್ಕೆ ಬಿಸಿಸಿಐ ಅಸಮಾಧಾನಗೊಂಡಿದೆ ಎನ್ನಲಾಗಿದೆ.

ಹೀಗಾಗಿ ಈಗ ಈ ಸೋಲಿನ ಬಗ್ಗೆ ಮತ್ತು ಮುಂದಿನ ಸರಣಿಗಳ ಯೋಜನೆಗಳ ಬಗ್ಗೆ ಗಂಭೀರ್ ಜೊತೆ ಬಿಸಿಸಿಐ ಚರ್ಚೆ ನಡೆಸುವ ಸಾಧ್ಯತೆಯಿದೆ. ಇದರಿಂದಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಯ್ಕೆ ಸಮಿತಿಯ ನಿರ್ಧಾರದಂತೇ ತಂಡದ ಆಯ್ಕೆ ನಡೆಯಲಿದೆ. ಈ ಸರಣಿ ಗಂಭೀರ್ ಪಾಲಿಗೂ ಮಾಡು ಇಲ್ಲವೇ ಮಡಿ ಸರಣಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್‌ ಕಿರೀಟ ಗೆದ್ದ ಬೆನ್ನಲ್ಲೇ ವಿಂಡೀಸ್‌ ಮೇಲೆ ಸವಾರಿ ಮಾಡುವತ್ತ ಟೀಂ ಇಂಡಿಯಾ

ಬಿಸಿಸಿಐ ಮುಂದೆ ಥಂಡಾ ಹೊಡೆದು ಏಷ್ಯಾ ಕಪ್ ಟ್ರೋಫಿ ವಾಪಸ್ ಮಾಡಿದ ಮೊಹ್ಸಿನ್ ನಖ್ವಿ

T20 ಕ್ರಿಕೆಟ್‌ ಬ್ಯಾಟಿಂಗ್ ರ್ಯಾಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ಅಭಿಷೇಕ್ ಶರ್ಮಾ

ಯೂತ್‌ ಟೆಸ್ಟ್‌: ಆಸ್ಟ್ರೇಲಿಯಾ ನೆಲದಲ್ಲೂ ಅಬ್ಬರಿಸಿ ಬೊಬ್ಬಿರಿದ 14ರ ಪೋರ ವೈಭವ್ ಸೂರ್ಯವಂಶಿ

ಏಷ್ಯಾ ಕಪ್ ಟ್ರೋಫಿ ಬೇಕಿದ್ರೆ ಸೂರ್ಯಕುಮಾರ್ ನೇ ನನ್ನತ್ರ ಬರಲಿ: ಮೊಹ್ಸಿನ್ ನಖ್ವಿ ಹೊಸ ನಖರಾ

ಮುಂದಿನ ಸುದ್ದಿ
Show comments