ಸೋಲಿನ ಬಳಿಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಸೌಲಭ್ಯಕ್ಕೆ ಕತ್ತರಿ ಹಾಕಿದ ಗೌತಮ್ ಗಂಭೀರ್

Krishnaveni K
ಸೋಮವಾರ, 28 ಅಕ್ಟೋಬರ್ 2024 (09:17 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಕೆಲವು ಕಠಿಣ ನಿರ್ಧಾರ ತೆಗೆದುಕೊಂಡಿದ್ದು, ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಇದುವರೆಗಿದ್ದ ಈ ಒಂದು ಸೌಲಭ್ಯಕ್ಕೆ ಕತ್ತರಿ ಬಿದ್ದಿದೆ.

ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ಅಭಿಮಾನಿಗಳು, ಮಾಜಿ ಕ್ರಿಕೆಟಿಗರಿಂದ ಭಾರೀ ಟೀಕೆ ವ್ಯಕ್ತವಾಗಿದೆ. ಟೀಂ ಇಂಡಿಯಾ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕೂಡಾ ದೇಶೀಯ ಕ್ರಿಕೆಟ್ ಆಡಬೇಕು ಇಲ್ಲವೇ ನಿವೃತ್ತಿಯಾಗಬೇಕು ಎಂಬ ಕೂಗು ಕೇಳಿಬಂದಿದೆ.

ಇದರ ಬೆನ್ನಲ್ಲೇ ಕೋಚ್ ಗೌತಮ್ ಗಂಭೀರ್ ಕೆಲವು ಕಟ್ಟುನಿಟ್ಟು ಮಾಡಿದ್ದಾರೆ. ಇದುವರೆಗೆ ಹಿರಿಯ ಅಟಗಾರರ ಕೊಹ್ಲಿ, ರೋಹಿತ್, ಜಸ್ಪ್ರೀತ್ ಬುಮ್ರಾರಂತಹ ಹಿರಿಯ ಆಟಗಾರರಿಗೆ ಕಡ್ಡಾಯವಾಗಿ ಎಲ್ಲಾ ಟ್ರೈನಿಂಗ್ ಸೆಷನ್ ಗೆ ಹಾಜರಾಗಬೇಕು ಎಂದೇನಿರಲಿಲ್ಲ. ಆದರೆ ಇದೀಗ ಗಂಭೀರ್ ಈ ಸೌಲಭ್ಯಕ್ಕೆ ಕತ್ತರಿ ಹಾಕಿದ್ದಾರೆ. ಇನ್ನು ಮುಂದೆ ಹಿರಿಯ-ಕಿರಿಯ ಎಂಬ ಬೇಧವಿಲ್ಲದೇ ಎಲ್ಲಾ ಆಟಗಾರರೂ ಕಡ್ಡಾಯವಾಗಿ ಎಲ್ಲಾ ಟ್ರೈನಿಂಗ್ ಸೆಷನ್ ಗೆ ಹಾಜರಾಗಬೇಕು ಎಂದು ನಿಯಮ ಮಾಡಿದ್ದಾರೆ.

ಮುಂದಿನ ಟೆಸ್ಟ್ ಪಂದ್ಯ ನವಂಬರ್ 1 ರಿಂದ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಇದಕ್ಕೆ ಎರಡು ದಿನಗಳ ಮೊದಲು ಅಂದರೆ ಅಕ್ಟೋಬರ್ 30 ರಿಂದ 31 ರವರೆಗೆ ಟೀಂ ಇಂಡಿಯಾ ತರಬೇತಿ ನಡೆಸಲಿದೆ. ಈ ಎರಡೂ ದಿನಗಳೂ ಎಲ್ಲಾ ಆಟಗಾರರೂ ಕಡ್ಡಾಯವಾಗಿ ಹಾಜರಿರಬೇಕು ಎಂದು ಗಂಭೀರ್ ಫರ್ಮಾನ್ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

Rohit Sharma: ಅಯ್ಯೋ.. ನಾನೇ ಕಟ್ಟಿದ ಕೋಟೆ ನನ್ನೆದುರಲ್ಲೇ ಒಡೆದೇ ಹೋಯ್ತಲ್ಲಾ

INDW vs NZW: ಒಂದೇ ದಿನ ಕಿಂಗ್ ಕೊಹ್ಲಿ ಶೂನ್ಯ, ಕ್ವೀನ್ ಸ್ಮೃತಿ ಮಂಧಾನ ಸೆಂಚುರಿ

ಮುಂದಿನ ಸುದ್ದಿ
Show comments