Webdunia - Bharat's app for daily news and videos

Install App

ಆರತಿ ಮಾಡಬೇಡಿ ಎಂದು ದುಬೈ ಹೋಟೆಲ್ ಸಿಬ್ಬಂದಿಗೆ ಖಡಕ್ ಆಗಿ ಹೇಳಿದ್ದರಂತೆ ಗೌತಮ್ ಗಂಭೀರ್

Krishnaveni K
ಬುಧವಾರ, 12 ಮಾರ್ಚ್ 2025 (15:41 IST)
ದುಬೈ: ಚಾಂಪಿಯನ್ಸ್ ಟ್ರೋಫಿ ಆಡಲು ದುಬೈನಲ್ಲಿದ್ದ ಟೀಂ ಇಂಡಿಯಾ ಆಟಗಾರರಿಗೆ ಆರತಿ ಮಾಡಿ ತಿಲಕವಿಟ್ಟು ಸ್ವಾಗತ ಕೋರಿದ್ದಕ್ಕೆ ಕೋಚ್ ಗೌತಮ್ ಗಂಭೀರ್ ಹಾಗೆ ಮಾಡಬೇಡಿ ಎಂದು ಖಡಕ್ ಸೂಚನೆ ಕೊಟ್ಟಿದ್ದರಂತೆ. ಅದಕ್ಕೆ ಕಾರಣವೂ ಇದೆ.

ಟೀಂ ಇಂಡಿಯಾ ಆಟಗಾರರು  ದುಬೈನಲ್ಲಿ ತಾಜ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಹೋಟೆಲ್ ವ್ಯವಸ್ಥಾಪಕ ಸಿಬ್ಬಂದಿ ಸೌರಭ್ ತಿವಾರಿ ಎಂಬವರು ಕೋಚ್ ಗೌತಮ್ ಗಂಭಿರ್ ನೀಡಿದ್ದ ಖಡಕ್ ಸೂಚನೆ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಪಾಕಿಸ್ತಾನ ವಿರುದ್ಧ ಭಾರತ ಪಂದ್ಯ ಗೆದ್ದು ಬಂದಾಗ ಆಟಗಾರರಿಗೆ ಆರತಿ ಮಾಡಿ, ತಿಲಕವಿಟ್ಟು ಸ್ವಾಗತ ಕೋರಲಾಯಿತು. ಆದರೆ ಕೆಲವೇ ಕ್ಷಣಗಳಲ್ಲಿ ಕೋಚ್ ಗೌತಮ್ ಗಂಭೀರ್ ಹೀಗೆ ಮಾಡಬೇಡಿ ಎಂದು ಖಡಕ್ ಸೂಚನೆ ನೀಡಿದರಂತೆ.

ಈಗಲೇ ನೀವು ಆರತಿ ಮಾಡಿ ತಿಲಕವಿಡಬೇಡಿ. ಅದಕ್ಕಿನ್ನೂ ಸಮಯವಿದೆ. ಟ್ರೋಫಿ ಗೆದ್ದ ಮೇಲೆ ಹೀಗೆ ಸಂಭ್ರಮಿಸೋಣ. ಈಗಲೇ ಸಂಭ್ರಮಿಸುವ ಸಮಯವಲ್ಲ ಎಂದು ಗಂಭೀರ್ ಸೂಚನೆ ನೀಡಿದ್ದರಂತೆ. ಅದರಂತೆ ಟ್ರೋಫಿ ಗೆದ್ದು ಬಂದ ಮೇಲೆ ಟೀಂ ಇಂಡಿಯಾ ಆಟಗಾರರಿಗೆ ಅದೇ ರೀತಿ ಸ್ವಾಗತ ಕೋರಲಾಯಿತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments