Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯರನ್ನು ಸೈಡ್ ಲೈನ್ ಮಾಡಲು ಪ್ಲ್ಯಾನ್ ಮಾಡಿರುವ ಗೌತಮ್ ಗಂಭೀರ್

Krishnaveni K
ಬುಧವಾರ, 17 ಜುಲೈ 2024 (10:48 IST)
ಮುಂಬೈ: ಟಿ20 ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾರಿಂದ ತೆರವಾದ ಸ್ಥಾನಕ್ಕೆ ಟೀಂ ಇಂಡಿಯಾದಲ್ಲಿ ಹೊಸ ನಾಯಕನ ಹುಡುಕಾಟ ಆರಂಭವಾಗಿದೆ. ನಿನ್ನೆ ಬಿಸಿಸಿಐ ಮೂಲಗಳಿಂದ ಹಾರ್ದಿಕ್ ಪಾಂಡ್ಯರೇ ಮುಂದಿನ ನಾಯಕ ಎಂಬ ಮಾತು ಕೇಳಿಬಂದಿತ್ತು. ಆದರೆ ಅದೀಗ ಉಲ್ಟಾ ಆಗುವ ಸಾಧ್ಯತೆಯಿದೆ.

ಟಿ20 ಕ್ರಿಕೆಟ್ ನಲ್ಲಿ ಹಾರ್ದಿಕ್ ಬದಲು ಸೂರ್ಯಕುಮಾರ್ ಯಾದವ್ ಗೆ ಪಟ್ಟ ಕಟ್ಟಲು ಗೌತಮ್ ಗಂಭೀರ್ ತಯಾರಿ ನಡೆಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಮೂಲಕ ಕ್ಯಾಪ್ಟನ್ ಆಗಿಯೇಬಿಟ್ಟೆ ಎಂಬ ಖುಷಿಯಲ್ಲಿದ್ದ ಹಾರ್ದಿಕ್ ಪಾಂಡ್ಯ ಸಡನ್ ಆಗಿ ಶಾಕ್ ಗೊಳಗಾಗಿದ್ದಾರೆ.

2026 ರ ವಿಶ್ವಕಪ್ ದೃಷ್ಟಿಯಲ್ಲಿಟ್ಟುಕೊಂಡು ಹಾರ್ದಿಕ್ ಬದಲು ಸೂರ್ಯಕುಮಾರ್ ಗೆ ನಾಯಕತ್ವ ನೀಡುವ ಬಗ್ಗೆ ಈಗಾಗಲೇ ಗೌತಮ್ ಗಂಭೀರ್ ಮತ್ತು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಈ ವಿಚಾರವನ್ನು ಹಾರ್ದಿಕ್ ಬಳಿಯೂ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.

ಹಾರ್ದಿಕ್ ಈಗಾಗಲೇ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಮಾತ್ರ ಲಭ್ಯರಿರುವುದಾಗಿ ಹೇಳಿದ್ದಾರೆ. ಫಿಟ್ ಆಗಿದ್ದರೂ ವೈಯಕ್ತಿಕ ಕಾರಣ ನೀಡಿ ಏಕದಿನ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಗಂಭೀರ್ ಗೆ ಸೂರ್ಯಕುಮಾರ್ ಜೊತೆ ಐಪಿಎಲ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಇದೇ ಕಾರಣಕ್ಕೆ ಸೂರ್ಯ ಮೇಲೆ ಗಂಭೀರ್ ಒಲವು ತೋರಿಸಿದ್ದಾರೆ. ಹಾರ್ದಿಕ್ ಪದೇ ಪದೇ ಗಾಯಗೊಳ್ಳುತ್ತಿರುವುದರಿಂದ ಸೂರ್ಯ ಸೂಕ್ತ ಎಂದು ಗಂಭೀರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments