ಗೌತಮ್ ಗಂಭೀರ್ ಮನವಿಗೆ ಇನ್ನೂ ಪ್ರತಿಕ್ರಿಯೆ ನೀಡದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಬುಮ್ರಾ

Krishnaveni K
ಬುಧವಾರ, 17 ಜುಲೈ 2024 (09:25 IST)
ಮುಂಬೈ: ಟೀಂ ಇಂಡಿಯಾ ನೂತನ ಕೋಚ್ ಆಗಿ ಆಯ್ಕೆಯಾಗಿರುವ ಗೌತಮ್ ಗಂಭೀರ್ ಭಾರತದ ಮೂವರು ಹಿರಿಯ ಆಟಗಾರರಿಗೆ ಮನವಿಯೊಂದನ್ನು ಮಾಡಿದ್ದಾರೆ. ಆದರೆ ಇದಕ್ಕೆ ಮೂವರೂ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಅಂತಹ ಮನವಿ ಏನು ಇಲ್ಲಿದೆ ಡೀಟೈಲ್ಸ್.

ಗೌತಮ್ ಗಂಭೀರ್ ಗೆ ಟೀಂ ಇಂಡಿಯಾ ಕೋಚ್ ಆಗಿ ಶ್ರೀಲಂಕಾ ವಿರುದ್ಧದ ಸರಣಿ ಮೊದಲ ಪ್ರವಾಸವಾಗಲಿದೆ. ಈ ಹುದ್ದೆ ನಿಭಾಯಿಸಲು ಅವರೂ ಉತ್ಸುಕರಾಗಿದ್ದಾರೆ. ಲಂಕಾದಲ್ಲಿ ಈ ಜುಲೈ ಕೊನೆಯ ವಾರದಿಂದ ಆಗಸ್ಟ್ ಮೊದಲ ವಾರದವರೆಗೆ ಭಾರತ ಟಿ20 ಮತ್ತು ಏಕದಿನ ಸರಣಿಗಳನ್ನು ಆಡಲಿದೆ.

ಟಿ20 ಕ್ರಿಕೆಟ್ ನಿಂದ ಕೊಹ್ಲಿ, ರೋಹಿತ್ ಈಗಾಗಲೇ ನಿವೃತ್ತರಾಗಿದ್ದಾರೆ. ಹೀಗಾಗಿ ಹಾರ್ದಿಕ್ ಪಾಂಡ್ಯ ನಾಯಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಏಕದಿನ ಸರಣಿಗೆ ಹಾರ್ದಿಕ್ ವೈಯಕ್ತಿಕ ಕಾರಣಗಳಿಂದ ಅಲಭ್ಯರಾಗಿರುವುದಾಗಿ ಬಿಸಿಸಿಐಗೆ ತಿಳಿಸಿದ್ದಾರಂತೆ. ಇತ್ತ ರೋಹಿತ್, ಕೊಹ್ಲಿ, ಬುಮ್ರಾ ಕೂಡಾ ನಮಗೆ ದೀರ್ಘ ಬ್ರೇಕ್ ಬೇಕು. ಹೀಗಾಗಿ ಲಂಕಾ ಏಕದಿನ ಸರಣಿಗೆ ಪರಿಗಣಿಸಬೇಡಿ ಎಂದಿದ್ದರು.

ಆದರೆ ಗೌತಮ್ ಗಂಭೀರ್ ಈ ಮೂವರೂ ಹಿರಿಯ ಆಟಗಾರರನ್ನು ಲಂಕಾ ಸರಣಿಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದ್ದಾರಂತೆ. ಆದರೆ ಇದಕ್ಕೆ ಇನ್ನೂ ಈ ಮೂವರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ. ಸದ್ಯಕ್ಕೆ ಮೂವರೂ ಕ್ರಿಕೆಟಿಗರು ತಮ್ಮ ಕುಟುಂಬದ ಜೊತೆ ಬೇರೆ ಬೇರೆ ತಾಣದಲ್ಲಿ ಟೂರ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ವಿಶ್ವಕಪ್ ಗೆದ್ದ ಮೈದಾನದಲ್ಲೇ ಸ್ಮೃತಿ ಮಂಧಾನಗೆ ಕನಸಿನಂತೆ ಪ್ರಪೋಸ್ ಮಾಡಿದ ಭಾವೀ ಪತಿ video

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

ಮುಂದಿನ ಸುದ್ದಿ
Show comments