ಮುಖ್ಯ ಕೋಚ್ ಸ್ಥಾನದಿಂದ ಗೌತಮ್ ಗಂಭೀರ್ ವಜಾ: ಬಿಸಿಸಿಐ ನಿರ್ಧಾರದ ಡೀಟೈಲ್ಸ್ ಇಲ್ಲಿದೆ

Krishnaveni K
ಶನಿವಾರ, 9 ನವೆಂಬರ್ 2024 (14:22 IST)
ಮುಂಬೈ: ಟೀಂ ಇಂಡಿಯಾದ ಇತ್ತೀಚೆಗೆ ಕಳಪೆ ಪ್ರದರ್ಶನದಿಂದ ಅಸಮಾಧಾನಗೊಂಡಿರುವ ಬಿಸಿಸಿಐ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ಕಿತ್ತೊಗೆಯಲು ತೀರ್ಮಾನಿಸಿದೆ ಎಂಬ ಸುದ್ದಿಯಿದೆ.

ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 3-0 ಅಂತರದಿಂದ ಹೀನಾಯವಾಗಿ ಸೋತಿತ್ತು. ಇದರಿಂದ ಭಾರತ ವಿಶ್ವ ಕ್ರಿಕೆಟ್ ಎದುರು ತಲೆತಗ್ಗಿಸುವಂತಾಗಿದೆ. ಇದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದೆ. ಇದೇ ಕಾರಣಕ್ಕೆ ಗೌತಮ್ ಗಂಭೀರ್ ಗೆ ಖಡಕ್ ಎಚ್ಚರಿಕೆಯನ್ನೂ ನೀಡಿದೆಯಂತೆ.

ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗಂಭೀರ್ ಪಾಲಿಗೆ ಡೆಡ್ ಲೈನ್ ಆಗಿದೆ. ಈ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕು. ಇಲ್ಲದೇ ಇದ್ದರೆ ಅದೇ ಕೊನೆ ಸರಣಿಯಾಗಲಿದೆ ಎಂದು ಗೌತಮ್ ಗಂಭೀರ್ ಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಐಪಿಎಲ್ ನಲ್ಲಿ ಸಕ್ಸಸ್ ಬಳಿಕ ಭಾರೀ ನಿರೀಕ್ಷೆಯೊಂದಿಗೆ ರಾಹುಲ್ ದ್ರಾವಿಡ್ ಸ್ಥಾನಕ್ಕೆ ಗಂಭೀರ್ ರನ್ನು ಕರೆತರಲಾಗಿತ್ತು. ಅವರು ಕೇಳಿದ ಸಹಾಯಕ ಸಿಬ್ಬಂದಿ, ಸೌಲಭ್ಯಗಳೆಲ್ಲವನ್ನೂ ನೀಡಲಾಗಿತ್ತು.

ಹಾಗಿದ್ದರೂ ಭಾರತ ಇದುವರೆಗೆ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಹೀಗಾಗಿ ಒಂದು ವೇಳೆ ಆಸ್ಟ್ರೇಲಿಯಾ ಸರಣಿಯಲ್ಲೂ ವಿಫಲರಾದರೆ ಗಂಭೀರ್ ತಮ್ಮ ಗುತ್ತಿಗೆ ಅವಧಿ ಮುಗಿಯುವವರೆಗೂ ಕೇವಲ ಟಿ20, ಏಕದಿನ ಮಾದರಿಗೆ ಮಾತ್ರ ನಾಯಕರಾಗಿ ಮುಂದುವರಿಯಲಿದ್ದಾರೆ. ಟೆಸ್ಟ್ ಮಾದರಿಗೆ ಬಿಸಿಸಿಐ ಹೊಸ ಕೋಚ್ ನೇಮಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments