ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್ ಬಾಲ್ ವಿರೂಪ ಪ್ರಕರಣದ ಹಿಂದಿದೆ ಬೇರೆಯದೇ ರಹಸ್ಯ ಸಂಚು?!

Webdunia
ಶುಕ್ರವಾರ, 30 ಮಾರ್ಚ್ 2018 (09:18 IST)
ನವದೆಹಲಿ: ಬಾಲ್ ವಿರೂಪ ಪಕ್ರರಣದಿಂದಾಗಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್, ಉಪ ನಾಯಕ ಡೇವಿಡ್ ವಾರ್ನರ್, ಕೆಮರೂನ್ ಬ್ಯಾನ್ ಕ್ರಾಫ್ಟ್ ತಲೆದಂಡವಾಗಿದೆ. ಆದರೆ ಈ ಪ್ರಕರಣದ ಹಿಂದೆ ಸಂಚು ಅಡಗಿದೆಯೇ? ಹೀಗೊಂದು ಅನುಮಾನವನ್ನು ಟೀಂ ಇಂಡಿಯಾ ಕ್ರಿಕೆಟಿಗ ಗೌತಮ್ ಗಂಭೀರ್ ವ್ಯಕ್ತಪಡಿಸಿದ್ದಾರೆ.

ಸದಾ ನೇರ ಮಾತುಗಳಿಗೆ ಜನ ಜನಿತವಾಗಿರುವ ಗಂಭೀರ್, ಸ್ಮಿತ್ ಮತ್ತು ವಾರ್ನರ್, ಹಿಂದೆ ವೇತನ ಹೆಚ್ಚಳಕ್ಕೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯೊಂದಿಗೆ ಹಗ್ಗ ಜಗ್ಗಾಟ ನಡೆಸಿದ್ದರು. ಅದರ ಪರಿಣಾಮವೇ ಇದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ನಾಯಕ ಮತ್ತು ಉಪನಾಯಕನ ಮೇಲೆ ವಿಧಿಸಿದ ಶಿಕ್ಷೆ ನಿಜಕ್ಕೂ ತೀರಾ ಕಠಿಣವಾದದ್ದು. ಇದು ವೇತನ ಹೆಚ್ಚಳಕ್ಕಾಗಿ ಈ ಕ್ರಿಕೆಟಿಗರು ನಡೆಸಿದ ಹೋರಾಟಕ್ಕೆ ಸಿಕ್ಕ ಶಿಕ್ಷೆಯೇ ಎಂದು ಗಂಭೀರ್ ಪ್ರಶ್ನಿಸಿದ್ದಾರೆ. ‘ಇಲ್ಲಿ ಆಟಗಾರರ ಪರವಾಗಿ ಹೋರಾಡಿದವರ ಮೇಲೆ ದಬ್ಬಾಳಿಕೆ ನಡೆಸಿದ ಇತಿಹಾಸವೇ ಇದೆ. ಅದಕ್ಕೆ ಉತ್ತಮ ಉದಾಹರಣೆ ಇಯಾನ್ ಚಾಪೆಲ್. ಸ್ಮಿತ್, ವಾರ್ನರ್ ಮೇಲೆ ಆಗಿರುವುದೂ ಇದುವೇ. ವೇತನ ಹೆಚ್ಚಳಕ್ಕೆ ಬೇಡಿಕೆಯಿಟ್ಟಿದ್ದಕ್ಕೆ ಇದು ಶಿಕ್ಷೆಯೇ?’ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾಗೆ ಅವಮಾನಕರ ಪದ ಬಳಸಿದ್ರಾ ಜಸ್ಪ್ರೀತ್ ಬುಮ್ರಾ video

ವಿರಾಟ್ ಕೊಹ್ಲಿ ಶತಕದ ಸ್ಟೈಲ್ ಕಾಪಿ ಮಾಡಿದ ಬಾಬರ್ ಅಜಮ್: ಸ್ವಂತಿಕೆನೇ ಇಲ್ವಾ ಎಂದ ನೆಟ್ಟಿಗರು video

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಮುಂದಿನ ಸುದ್ದಿ
Show comments