Webdunia - Bharat's app for daily news and videos

Install App

ಸಿಎಂ ಕಡೆಯಿಂದಲೇ ನಮಗೆ ಆಹ್ವಾನ ಬಂದಿದ್ದು: ಗೊತ್ತೇ ಇಲ್ಲ ಎಂದಿದ್ದ ಸಿದ್ದರಾಮಯ್ಯ ಈಗೇನಂತಾರೆ

Krishnaveni K
ಬುಧವಾರ, 11 ಜೂನ್ 2025 (09:27 IST)
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ದುರಂತವಾದ ಬಳಿಕ ಸರ್ಕಾರದ ಮೇಲೆ ಅಪವಾದ ಬಂದಾಗ ರಾಜ್ಯಪಾಲರನ್ನು ಯಾರು ಆಹ್ವಾನಿಸಿದ್ದು ಎಂದು ನಮಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇದೀಗ ರಾಜಭವನದಿಂದಲೇ ಇದಕ್ಕೆ ಸ್ಪಷ್ಟನೆ ಬಂದಿದ್ದು ಸಿಎಂ ಕಡೆಯಿಂದಲೇ ಆಹ್ವಾನ ಬಂದಿದ್ದು ಎನ್ನಲಾಗಿದೆ. ಈಗೇನಂತಾರೆ ಸಿಎಂ ಸಿದ್ದರಾಮಯ್ಯ ಎನ್ನುವುದು ಎಲ್ಲರ ಪ್ರಶ್ನೆಯಾಗಿದೆ.

ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಹೊಣೆಯನ್ನು ಪೊಲೀಸರು ಮತ್ತು ಆರ್ ಸಿಬಿ, ಕೆಎಸ್ ಸಿಎ ಮೇಲೆ ಹೊರಿಸಲು ಸರ್ಕಾರ ಪ್ರಯತ್ನ ನಡೆಸುತ್ತಿರುವುದು ಈಗ ರಹಸ್ಯವಾಗೇನೂ ಉಳಿದಿಲ್ಲ. ಸ್ವತಃ ಸಿಎಂ ಈ ಕಾರ್ಯಕ್ರಮ ಆಯೋಜಿಸಿದ್ದು ನಾವಲ್ಲ, ನಮಗೆ ಮುಜುಗರವಾಗಲ್ಲ ಎಂದಿದ್ದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಸುವುದೂ ನಮ್ಮ ಯೋಜನೆಯಾಗಿರಲಿಲ್ಲ. ರಾಜ್ಯಪಾಲರನ್ನು, ಇತರ ಗಣ್ಯರನ್ನು ಯಾರು ಆಹ್ವಾನಿಸಿದ್ದು ನಮಗೆ ಗೊತ್ತಿಲ್ಲ ಎಂದಿದ್ದರು. ಆದರೆ ಇದಕ್ಕೀಗ ರಾಜಭವನದಿಂದಲೇ ಉತ್ತರ ಬಂದಿದೆ. ರಾಜಭವನದ ಉತ್ತರ ಈಗ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ರಾಜ್ಯಪಾಲರ ಉತ್ತರದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಮಗೆ ಗೊತ್ತೇ ಇಲ್ಲ ಎಂದಿರುವುದು ಸುಳ್ಳೇ ಅಥವಾ ಜವಾಬ್ಧಾರಿಯಿಂದ ಜಾರಿಕೊಳ್ಳುವ ಯತ್ನವೇ ಎಂಬ ಅನುಮಾನ ಶುರುವಾಗಿದೆ. ಮುಖ್ಯಮಂತ್ರಿ ಕಡೆಯಿಂದ ಅಧಿಕೃತ ಆಹ್ವಾನ ಬಂದಿದ್ದಕ್ಕೇ ರಾಜ್ಯಪಾಲರು ಭಾಗಿಯಾಗಿದ್ದರು ಎಂದು ರಾಜಭವನದ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments