ಟೀಂ ಇಂಡಿಯಾದ ‘ಹನುಮ’ನ ಯಶಸ್ಸಿನ ಹಿಂದೆ ರಾಹುಲ್ ದ್ರಾವಿಡ್

Webdunia
ಬುಧವಾರ, 12 ಸೆಪ್ಟಂಬರ್ 2018 (09:37 IST)
ದಿ ಓವಲ್: ಒಂದು ಕಡೆ ಟೀಂ ಇಂಡಿಯಾದ ಘಟಾನುಘಟಿ ಬ್ಯಾಟ್ಸ್ ಮನ್ ಗಳೆಲ್ಲಾ ಪೆವಿಲಿಯನ್ ಸೇರಿಯಾಗಿತ್ತು. ಇನ್ನೊಂದು ಕಡೆ ರನ್ ಗಳಿಸಬೇಕಾದ ಒತ್ತಡವಿತ್ತು. ಹೀಗಿರುವಾಗ ಚೊಚ್ಚಲ ಪಂದ್ಯವಾಡಲು ಮೈದಾನಕ್ಕಿಳಿದ ಹನುಮ ವಿಹಾರಿ ಕೆಚ್ಚೆದೆಯಿಂದ ಆಡಿ ಅರ್ಧಶತಕ ಗಳಿಸಿಯೇ ಬಿಟ್ಟರು.

ಮತ್ತೆ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾದ ಎಲ್ಲಾ ಬೌಲರ್ ಗಳೂ ಜೋ ರೂಟ್ ಮತ್ತು ಅಲೆಸ್ಟರ್ ಕುಕ್ ಜೋಡಿಯನ್ನು ಬೇರ್ಪಡಿಸಲು ಇನ್ನಿಲ್ಲದ ಪ್ರಯತ್ನ ಮಾಡಿ ಸೋತು ಹೋಗಿದ್ದರು. ಈ ಸಂದರ್ಭದಲ್ಲಿ ಬೌಲಿಂಗ್ ಗೆ ಇಳಿದು ಇಬ್ಬರನ್ನೂ ಬೆನ್ನು ಬೆನ್ನಿಗೆ ಪೆವಿಲಿಯನ್ ಗೆ ಕಳುಹಿಸಿದರು. ಈಗಲೂ ಅದೇ ‘ಹನುಮ’ ಟೀಂ ಇಂಡಿಯಾವನ್ನು ಕಾಪಾಡಿದ.

ಆದರೆ ಚೊಚ್ಚಲ ಪಂದ್ಯವಾಡಿದ ಈ ಹುಡುಗನಿಗೆ ಅಂತಹದ್ದೊಂದು ಧೈರ್ಯ ಬರಲು ಕಾರಣ ರಾಹುಲ್ ದ್ರಾವಿಡ್ ಅಂತೆ! ಹಾಗಂತ ಮಾಧ್ಯಮಗಳ ಎದುರು ತಮ್ಮ ಗುರು, ಅಂಡರ್ 19 ಕೋಚ್ ರಾಹುಲ್ ದ್ರಾವಿಡ್ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ ಹನುಮ ವಿಹಾರಿ.

ಜೇಮ್ಸ್ ಆಂಡರ್ಸನ್, ಬ್ರಾಡ್ ರ ಬೌಲಿಂಗ್ ಎದುರಿಸುವ ಬಗ್ಗೆ ನಾನು ತುಂಬಾ ಭಯಗೊಂಡಿದ್ದೆ. ಆ ಸಂದರ್ಭದಲ್ಲಿ ರಾಹುಲ್ ದ್ರಾವಿಡ್ ಸರ್ ಗೆ ಕರೆ ಮಾಡಿದೆ. ಅವರ ಜತೆ ಫೋನ್ ನಲ್ಲಿ ಕೆಲವು ನಿಮಿಷಗಳವರೆಗೆ ಫೋನ್ ನಲ್ಲಿ ಮಾತನಾಡಿದಾಗ ನನಗೆ ಧೈರ್ಯ ಬಂತು. ನಿನಗೆ ಆ ಶಕ್ತಿ, ತಾಳ್ಮೆ ಇದೆ ಎಂದು ಅವರು ನನ್ನಲ್ಲಿ ಧೈರ್ಯ ತುಂಬಿದ್ದರು. ಆ ಧೈರ್ಯದಿಂದಲೇ ನನಗೆ ಅರ್ಧಶತಕ ಗಳಿಸಲು ಸಾಧ್ಯವಾಯಿತು ಎಂದು ಹನುಮ ವಿಹಾರಿ ಹೇಳಿದ್ದಾರೆ. ಅಂತೂ ದ್ರಾವಿಡ್ ಕಣ್ಣ ಮುಂದೆ ಬೆಳೆದ ಹುಡುಗ ಅವರಂತೆಯೇ ಆಡಿ ಪ್ರಥಮ ಇನಿಂಗ್ಸ್ ನಲ್ಲಿ ಭಾರತದ ಮಾನ ಕಾಪಾಡಿದ್ದ ಜತೆಗೆ ಗುರು ದ್ರಾವಿಡ್ ಹೆಸರು ಉಳಿಸಿದ್ದ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಮುಂದಿನ ಸುದ್ದಿ
Show comments