ಟೀಂ ಇಂಡಿಯಾ ಕ್ರಿಕೆಟಿಗ ಹರ್ಭಜನ್ ಸಿಂಗ್ ಗೆ ಈ ಪಾಟಿ ಸಿಟ್ಟು ಬಂದಿದ್ದೇಕೆ?!

Webdunia
ಸೋಮವಾರ, 26 ಮಾರ್ಚ್ 2018 (07:02 IST)
ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ಹರ್ಭಜನ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಮೇಲೆ ಸಿಟ್ಟಾಗಿದ್ದಾರೆ. ಇದಕ್ಕೆ ಕಾರಣ ಆಸ್ಟ್ರೇಲಿಯಾ ಮತ್ತು ದ.ಆಫ್ರಿಕಾ ನಡುವೆ ನಡೆದ ಪಂದ್ಯದಲ್ಲಿ ಆದ ಬಾಲ್ ಟೆಂಪರಿಂಗ್ ಘಟನೆ.

ಹಿಂದೊಮ್ಮೆ ಇದೇ ಆಸೀಸ್ ತಂಡದ ವಿರುದ್ಧ ಜನಾಂಗೀಯ ನಿಂದನೆ ಮಾಡಿದ್ದರು ಎಂಬ ಆರೋಪಕ್ಕೊಳಗಾಗಿದ್ದ ಹರ್ಭಜನ್ ಸಿಂಗ್ ಇದೀಗ ಆಸೀಸ್ ಆಟಗಾರರ ವಿಚಾರದಲ್ಲಿ ಐಸಿಸಿ ನಡೆದುಕೊಂಡ ರೀತಿಗೆ ಸಿಟ್ಟಾಗಿದ್ದಾರೆ.

ಬಾಲ್ ಟೆಂಪರಿಂಗ್ ಮಾಡಿದ್ದಕ್ಕೆ ಆಸೀಸ್ ನಾಯಕ ಸ್ಮಿತ್ ಗೆ ಒಂದು ಪಂದ್ಯದ ನಿಷೇಧ ಮತ್ತು ಶೇ.100 ರಷ್ಟು ಪಂದ್ಯದ ಸಂಭಾವನೆಯಲ್ಲಿ ದಂಡದ ಶಿಕ್ಷೆಯನ್ನು ಐಸಿಸಿ ನೀಡಿದೆ. ಹಾಗಿದ್ದರೂ ಹರ್ಭಜನ್ ಐಸಿಸಿ ತಾರತಮ್ಯ ಮಾಡಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಭಜಿ ‘ವಾವ್ ಐಸಿಸಿ. ಬೇರೆ ಬೇರೆ ವ್ಯಕ್ತಿಗಳಿಗೆ ಬೇರೆ ಬೇರೆ ಕಾನೂನಾ? ದ.ಆಫ್ರಿಕಾದಲ್ಲಿ 2001 ರಲ್ಲಿ ನಾವು ಹೆಚ್ಚು ಬಾರಿ ಅಪೀಲ್ ಮಾಡಿದೆವೆಂದು 6 ಮಂದಿಗೆ ನಿಷೇಧ ಹೇರಿದ್ರಿ? ಈಗ್ಯಾಕೆ ಚೆಂಡು ವಿರೂಪಗೊಳಿಸಿದ ಬ್ಯಾನ್ ಕ್ರಾಫ್ಟ್ ಗೆ ನಿಷೇಧವಿಲ್ಲ? 2008 ರ ಸಿಡ್ನಿ ಟೆಸ್ಟ್ ಘಟನೆ ನಿಮಗೆ ನೆನಪಿಲ್ಲವೇ? ತಪ್ಪು ಮಾಡದೆಯೂ 3 ಪಂದ್ಯಕ್ಕೆ ನಿಷೇಧ ಹೇರಿದಿರಿ. ಈಗ ಬೇರೆ ಬೇರೆ ವ್ಯಕ್ತಿಗಳಿಗೆ ಬೇರೆ ಬೇರೆ ನಿಯಮ’ ಎಂದು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments