ದ್ರಾವಿಡ್ ಕಾಲದಲ್ಲಿ ಇದೆಲ್ಲಾ ನಡೆಯಲ್ಲ: ರವಿಶಾಸ್ತ್ರಿಗೆ ತಿರುಗೇಟು ಕೊಟ್ಟ ಹರ್ಭಜನ್ ಸಿಂಗ್

Webdunia
ಗುರುವಾರ, 27 ಜನವರಿ 2022 (08:45 IST)
ಮುಂಬೈ: ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಹೇಳಿಕೆಯೊಂದಕ್ಕೆ ತಿರುಗೇಟು ಕೊಟ್ಟಿರುವ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಕೋಚ್ ದ್ರಾವಿಡ್ ರನ್ನು ಸಮರ್ಥಿಸಿಕೊಂಡಿದ್ದಾರೆ.

ಕೊಹ್ಲಿ ಇನ್ನಷ್ಟು ದಿನ ಟೀಂ ಇಂಡಿಯಾ ಟೆಸ್ಟ್ ನಾಯಕರಾಗಿ ಮುಂದುವರಿಯಬಹುದಿತ್ತು. ಆದರೆ ಕೆಲವರಿಗೆ ಅವರು ಗೆಲ್ಲುವುದೇ ಇಷ್ಟವಿರಲಿಲ್ಲ ಎಂದು ರವಿಶಾಸ್ತ್ರಿ ಟಾಂಗ್ ಕೊಟ್ಟಿದ್ದರು. ಇದಕ್ಕೆ ತಿರುಗೇಟು ನೀಡಿರುವ ಭಜಿ, ನಾವಂತೂ ಕೊಹ್ಲಿ ಇನ್ನೂ ನಾಯಕರಾಗಿ 40 ಟೆಸ್ಟ್ ಗೆಲುವು ಕಂಡು ಯಶಸ್ವೀ ನಾಯಕನಾಗಲಿ ಎಂದೇ ಬಯಸುತ್ತಿದ್ದೆವು. ರವಿಶಾಸ್ತ್ರಿ ಯಾರನ್ನು ಉದ್ದೇಶಿಸಿ ಹೀಗೆ ಹೇಳಿದರೋ ಗೊತ್ತಿಲ್ಲ ಎಂದಿದ್ದಾರೆ.

ಇನ್ನು, ರವಿಶಾಸ್ತ್ರಿಗೆ ಇನ್ನಷ್ಟು ಟಾಂಗ್ ಕೊಟ್ಟಿರುವ ಭಜಿ, ‘ರಾಹುಲ್ ದ್ರಾವಿಡ್ ಕೋಚ್ ಆಗಿರುವಾಗ ಟೀಂ ಇಂಡಿಯಾ ಮೊದಲ ಓವರ್ ನಿಂದಲೇ ಸ್ಪಿನ್ನರ್ ಗಳಿಗೆ ಸಹಾಯ ಮಾಡುವ ಪಿಚ್ ಗಳಲ್ಲಿ ಆಡಬಹುದು ಎಂದು ನನಗನಿಸುತ್ತಿಲ್ಲ. ಬ್ಯಾಟಿಗರಿಗೂ ನೆರವಾಗುವ ಪಿಚ್ ನಲ್ಲಿ ಆಡುತ್ತಾರೆ. ಕಳೆದ ಮೂರು ವರ್ಷಗಳಲ್ಲಿ ಬ್ಯಾಟಿಗರ ಸಾಧನೆ ಗಮನಿಸಿದರೆ, ನಮ್ಮ ಬ್ಯಾಟಿಗರಿಗೆ ರನ್ ಗಳಿಸುವುದೇ ಮರೆತು ಹೋಗಿದೆ ಎಂದು ಗೊತ್ತಾಗುತ್ತದೆ. ಯಾಕೆಂದರೆ ಕಳೆದ 2-3 ವರ್ಷಗಳಿಂದ ನಮ್ಮ ಬ್ಯಾಟಿಗರು ರನ್ ಮಾಡುತ್ತಲೇ ಇಲ್ಲ. ಬ್ಯಾಟಿಗರು ರನ್ ಗಳಿಸದೇ ಇದ್ದಾಗ ಆಟಗಾರರು ಒತ್ತಡಕ್ಕೆ ಸಿಲುಕುತ್ತಾರೆ. ನೀವು ತವರಿನಲ್ಲಿ ಗೆಲುವು ಕಾಣಬಹುದು ಆದರೆ ಆಟಗಾರರು ಬೆಳೆಯಲ್ಲ’ ಎಂದು ಭಜಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್ ಜೊತೆ ಫೋಟೋಗೆ ಪೋಸ್ ಕೊಡಿ ಎಂದ್ರೆ ನಾವೇನು ಫಿಲಂ ಸ್ಟಾರ್ ಅಲ್ಲ ಎಂದ ರಿಯಾನ್ ಪರಾಗ್ video

IPL 2026: ಕ್ವಾಲಿಫೈಯರ್ ಪಂದ್ಯಕ್ಕೆ ಮುನ್ನ ಆರ್ ಸಿಬಿ, ಗುಜರಾತ್ ಟೈಟನ್ಸ್ ಗೆ ಗುಡ್ ನ್ಯೂಸ್

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments