ಮೊಹಾಲಿ: ಟೀಂ ಇಂಡಿಯಾದ ಯುವ ಬೌಲರ್ ಹಾರ್ದಿಕ್ ಪಾಂಡ್ಯ ಇನ್ನು ಆರು ವಾರಗಳ ಕಾಲ ಬಾಲ್ ಮುಟ್ಟುವಂತಿಲ್ಲ. ನೆಟ್ ಪ್ರಾಕ್ಟೀಸ್ ಮಾಡುವಾಗ ಭುಜದ ಗಾಯಕ್ಕೊಳಗಾಗಿದ್ದ ಹಾರ್ದಿಕ್ ಗಾಯ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹೀಗಾಗಿ ಆರು ವಾರ ಹಾರ್ದಿಕ್ ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ. ಇದರಿಂದಾಗಿ ಅವರು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಮಾತ್ರವಲ್ಲದೆ, ಜನವರಿ 15 ರಿಂದ ಆರಂಭವಾಗಲಿರುವ ಏಕದಿನ ಪಂದ್ಯಗಳನ್ನೂ ತಪ್ಪಿಸಿಕೊಳ್ಳಲಿದ್ದಾರೆ. ಏಕದಿನ ಪಂದ್ಯದಲ್ಲಿ ಪ್ರಮುಖ ಬೌಲರ್ ಆಗಿರುವ ಹಾರ್ದಿಕ್ ಅನುಪಸ್ಥಿತಿ ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತವಾಗಲಿದೆ.
ನೆಟ್ ಸೆಷನ್ ನಲ್ಲಿ ಬಾಲ್ ಅವರ ಭುಜಕ್ಕೆ ಹೊಡೆದ ಪರಿಣಾಮ ಅವರು ಗಂಭೀರ ಗಾಯಕ್ಕೊಳಗಾಗಿದ್ದಾರೆ. ಈಗಾಗಲೇ ಟೀಂ ಇಂಡಿಯಾದ ಗಾಯಾಳುಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವೃದ್ಧಿಮಾನ್ ಸಹಾ ಇದ್ದಾರೆ. ಇವರ ಜತೆಗೆ ಹಾರ್ದಿಕ್ ಹೊಸ ಸೇರ್ಪಡೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ