ಸಹೋದರನಿಂದಲೇ ಹಾರ್ದಿಕ್ ಪಾಂಡ್ಯಗೆ ಕೋಟ್ಯಾಂತರ ಹಣ ದೋಖಾ

Krishnaveni K
ಗುರುವಾರ, 11 ಏಪ್ರಿಲ್ 2024 (12:11 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ, ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್‍ ಪಾಂಡ್ಯಗೆ ಅವರ ಸಹೋದರನಿಂದಲೇ 4.3 ಕೋಟಿ ರೂ. ವಂಚನೆಯಾದ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಅವರ ಮಲಸಹೋದರ ವೈಭವ್ ಪಾಂಡ್ಯ ಎಂಬಾತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ಸಹಭಾಗಿತ್ವದ ಉದ್ಯಮವೊಂದರಿಂದ ಕ್ರಿಕೆಟಿಗರ ಹೆಸರು ಹೇಳಿಕೊಂಡು 4.3 ಕೋಟಿ ರೂ. ವಂಚನೆ ಮಾಡಿದ್ದಾರೆ.

ಕೃನಾಲ್, ಹಾರ್ದಿಕ್ ಮತ್ತು ವೈಭವ್ ಸೇರಿಕೊಂಡು ಕಂಪನಿಯೊಂದನ್ನು ಆರಂಭಿಸಿದ್ದರು. ಇದರಲ್ಲಿ ಹಾರ್ದಿಕ್ ಮತ್ತು ಕೃನಾಲ್ ಶೇ.40 ರಷ್ಟು ಬಂಡವಾಳ ಹಾಕಿದ್ದರೆ ವೈಭವ್‍ 20% ಬಂಡವಾಳ ಹೂಡಿದ್ದರು. ಷೇರುಗಳಿಗೆ ಅನುಗುಣವಾಗಿ ಪಾಲು ಹಂಚಿಕೆ ಮಾಡುವುದೆಂದು ತೀರ್ಮಾನವಾಗಿತ್ತು. ಆದರೆ ಹಾರ್ದಿಕ್-ಕೃನಾಲ್ ಗಮನಕ್ಕೆ ತಾರದೇ ಅದೇ ಕಂಪನಿ ಹೆಸರು ಹೇಳಿಕೊಂಡು ವೈಭವ್ ಇನ್ನೊಂದು ಕಂಪನಿ ತೆರೆದಿದ್ದರು.

ಇದರಿಂದಾಗಿ ಕಂಪನಿ ಜೊತೆ ಮಾಡಿಕೊಂಡಿದ್ದ ಮೂಲ ಒಪ್ಪಂದ ರದ್ದಾಗಿ 3 ಕೋಟಿ ರೂ. ನಷ್ಟವಾಗಿತ್ತು. ಅಲ್ಲದೆ ವೈಭವ್ ರಹಸ್ಯವಾಗಿ ತನ್ನ ಲಾಭಾಂಶವನ್ನು 20% ರಿಂದ 33.3% ಗೆ ಏರಿಕೆ ಮಾಡಿದ್ದರು. ಇದು ನಿಯಮಗಳಿಗೆ ವಿರುದ್ಧವಾಗಿರುವುದಲ್ಲದೆ, ಹಾರ್ದಿಕ್-ಕೃನಾಲ್ ಗೆ ನಷ್ಟವಾಗಿತ್ತು. ಈ ಕಾರಣಕ್ಕೆ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ವಂಚನೆ ಪ್ರಕರಣದಲ್ಲಿ ವೈಭವ್ ನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments