Select Your Language

Notifications

webdunia
webdunia
webdunia
webdunia

ದಿಡೀರ್ ಆಗಿ ಟೀಂ ಇಂಡಿಯಾ ನಾಯಕ ಪಟ್ಟ ಪಡೆಯಲಿದ್ದಾರಾ ಹಾರ್ದಿಕ್ ಪಾಂಡ್ಯ?

ದಿಡೀರ್ ಆಗಿ ಟೀಂ ಇಂಡಿಯಾ ನಾಯಕ ಪಟ್ಟ ಪಡೆಯಲಿದ್ದಾರಾ ಹಾರ್ದಿಕ್ ಪಾಂಡ್ಯ?
ಮುಂಬೈ , ಭಾನುವಾರ, 15 ಮೇ 2022 (11:11 IST)
ಮುಂಬೈ: ದಕ್ಷಿಣಾ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ಸದ್ಯದಲ್ಲೇ ನಡೆಯಲಿದೆ.

ಈ ಸರಣಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಪ್ರಮುಖರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಆಯ್ಕೆ ಸಮಿತಿ ಚಿಂತನೆ ನಡೆಸಿದೆ. ಅವರ ಬದಲು ಶಿಖರ್ ಧವನ್, ಹಾರ್ದಿಕ್ ಪಾಂಡ್ಯ ತಂಡಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ.

ಐಪಿಎಲ್ ನಲ್ಲಿ ಗುಜರಾತ್ ತಂಡದ ನಾಯಕತ್ವ ಮತ್ತು ಆಟಗಾರನಾಗಿ ಯಶಸ್ಸು ಕಂಡಿರುವ ಹಾರ್ದಿಕ್ ಪಾಂಡ್ಯಗೆ ಈಗ ಅದೃಷ್ಟ ಖುಲಾಯಿಸಲಿದೆ. ಪ್ರಮುಖರ ಅನುಪಸ್ಥಿತಿಯಲ್ಲಿ ಹಾರ್ದಿಕ್ ಅಥವಾ ಶಿಖರ್ ಧವನ್ ಗೆ ಟೀಂ ಇಂಡಿಯಾ ನಾಯಕತ್ವ ಸಿಗುವ ಸಾಧ‍್ಯತೆಯಿದೆ. ಕಳೆದ ಕೆಲವು ಸಮಯದಿಂದ ಫಾರ್ಮ್ ಕೊರತೆಯಿಂದ ತಂಡಕ್ಕೆ ಆಯ್ಕೆಯಾಗದೇ ಇದ್ದಿದ್ದ ಹಾರ್ದಿಕ್ ಗೆ ಈಗ ದಿಡೀರ್ ನಾಯಕರಾಗುವ ಅವಕಾಶ ಸಿಕ್ಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2022: ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಲಕ್ನೋಗೆ ರಾಜಸ್ಥಾನ್ ಎದುರಾಳಿ