Select Your Language

Notifications

webdunia
webdunia
webdunia
Tuesday, 1 April 2025
webdunia

ವಿಶ್ವಕಪ್ ನಿಂದ ಹೊರಬಿದ್ದ ಹಾರ್ದಿಕ್ ಪಾಂಡ್ಯ: ಕನ್ನಡಿಗನಿಗೆ ಒಲಿದ ಅದೃಷ್ಟ

ವಿಶ್ವಕಪ್ ನಿಂದ ಹೊರಬಿದ್ದ ಹಾರ್ದಿಕ್ ಪಾಂಡ್ಯ: ಕನ್ನಡಿಗನಿಗೆ ಒಲಿದ ಅದೃಷ್ಟ
ಕೋಲ್ಕೊತ್ತಾ , ಶನಿವಾರ, 4 ನವೆಂಬರ್ 2023 (09:30 IST)
ಕೋಲ್ಕೊತ್ತಾ: ಬಾಂಗ್ಲಾದೇಶ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯದ ವೇಳೆ ಬೌಲಿಂಗ್ ಮಾಡುವಾಗ ಬಿದ್ದು ಕಾಲಿಗೆ ಗಾಯ ಮಾಡಿಕೊಂಡಿದ್ದ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಹಾರ್ದಿಕ್ ಚೇತರಿಸಿಕೊಂಡು ಸೆಮಿಫೈನಲ್ ಹಂತದ ಪಂದ್ಯದ ವೇಳೆ ತಂಡಕ್ಕೆ ವಾಪಸಾಗಬಹುದು ಎಂದು ಎಲ್ಲರ ಲೆಕ್ಕಾಚಾರವಾಗಿತ್ತು. ಆದರೆ ಅದು ಸುಳ್ಳಾಗಿದೆ.

ಹಾರ್ದಿಕ್ ಗಾಯ ಗಂಭೀರವಾಗಿದ್ದು, ವಿಶ್ವಕಪ್ ನಲ್ಲಿ ಉಳಿದ ಯಾವುದೇ ಪಂದ್ಯದಲ್ಲಿ ಆಡುವ ಸ್ಥಿತಿಯಲ್ಲಿಲ್ಲ. ಅವರ ಬದಲಿಗೆ ಕರ್ನಾಟಕ ಮೂಲದ ವೇಗಿ ಪ್ರಸಿದ್ಧ ಕೃಷ್ಣಗೆ ತಂಡದಲ್ಲಿ ಸ್ಥಾನ ಸಿಕ್ಕಿದೆ. ಈ ಮೂಲಕ ವಿಶ್ವಕಪ್ ನಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶ ಪ್ರಸಿದ್ಧಗೆ ಒಲಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏಕದಿನ ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ ಗೇರಲು ಆಸೀಸ್ ಗೆ ಇಂಗ್ಲೆಂಡ್ ವಿರುದ್ಧ ಗೆಲ್ಲಲೇಬೇಕು