Webdunia - Bharat's app for daily news and videos

Install App

ವಿಂಡೀಸ್ ಮಂಡಳಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಹಾರ್ದಿಕ್ ಪಾಂಡ್ಯ

Webdunia
ಬುಧವಾರ, 2 ಆಗಸ್ಟ್ 2023 (15:59 IST)
ಪೋರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾ ಹಿರಿಯ ಆಟಗಾರರು ಕೆರೆಬಿಯನ್ ನಾಡಿನಲ್ಲಿ ತಮಗಾಗುತ್ತಿರುವ ಅಸೌಕರ್ಯಗಳ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿತ್ತು. ಅದನ್ನೀಗ ಹಾರ್ದಿಕ್ ಪಾಂಡ್ಯ ಬಹಿರಂಗವಾಗಿಯೇ ಹೊರಹಾಕಿದ್ದಾರೆ.

ಏಕದಿನ ಸರಣಿ ಬಳಿಕ ಮಾತನಾಡಿರುವ ಹಾರ್ದಿಕ್ ಪಾಂಡ್ಯ ಇಲ್ಲಿನ ಅವ್ಯವಸ್ಥೆ ಬಗ್ಗೆ ಕಿಡಿ ಕಾರಿದ್ದಾರೆ. ನಾಳೆಯಿಂದ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಟಿ20 ಏಕದಿನ ಪಂದ್ಯಕ್ಕೆ ಚಾಲನೆ ಸಿಗಲಿದೆ. ಇದಕ್ಕೆ ಮೊದಲು ಇಲ್ಲಿನ ವ್ಯವಸ್ಥೆ ಬಗ್ಗೆ ಹಾರ್ದಿಕ್ ಗೆ ಪ್ರಶ್ನೆ ಮಾಡಲಾಯಿತು.

ಈ ವೇಳೆ ಮಾತನಾಡಿರುವ ಅವರು ‘ಕಳೆದ ಬಾರಿ ವಿಂಡೀಸ್ ಪ್ರವಾಸ ಮಾಡಿದ್ದಾಗಲೂ ನಮಗೆ ಇದೇ ಸಮಸ್ಯೆ ಎದುರಾಗಿತ್ತು. ಈಗಲೂ ಪ್ರಯಾಣದ್ದೇ ಸಮಸ್ಯೆಯಾಗಿದೆ. ನಾವು ಐಷಾರಾಮಿ ಸೌಲಭ್ಯ ಕೇಳುತ್ತಿಲ್ಲ. ಆದರೆ ಕನಿಷ್ಠ ಮೂಲಭೂತ ಸೌಕರ್ಯವನ್ನಾದರೂ ಸರಿಯಾಗಿ ಒದಗಿಸಲಿ’ ಎಂದು ವಿಂಡೀಸ್ ಮಂಡಳಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಏಕದಿನ ಸರಣಿ ಆರಂಭಕ್ಕೆ ಮುನ್ನ ಪ್ರಯಾಣ ದೂರ ಮತ್ತು ವಿಮಾನ ವಿಳಂಬ ಮುಂತಾದ ಅವ್ಯವಸ್ಥೆ ಬಗ್ಗೆ ಹಿರಿಯ ಆಟಗಾರರು ಬಿಸಿಸಿಐಗೆ ಪತ್ರ ಬರೆದು ಅಸಮಾಧಾನ ತೋಡಿಕೊಂಡಿದ್ದರು ಎನ್ನಲಾಗಿತ್ತು. ಇದೀಗ ಹಾರ್ದಿಕ್ ಬಹಿರಂಗವಾಗಿಯೇ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments