ಕೆಟ್ಟ ಮೇಲೂ ಬುದ್ಧಿ ಕಲಿಯದ ಹರ್ಷಿತ್ ರಾಣಾ, ದುಲೀಪ್ ಟ್ರೋಫಿಯಲ್ಲೂ ಮತ್ತದೇ ಚಾಳಿ

Krishnaveni K
ಶುಕ್ರವಾರ, 6 ಸೆಪ್ಟಂಬರ್ 2024 (10:39 IST)
ಬೆಂಗಳೂರು: ಕೆಲವರಿಗೆ ಕೆಟ್ಟ ಮೇಲೂ ಬುದ್ಧಿ ಬರಲ್ಲ. ಅದಕ್ಕೆ ಈಗ ಹರ್ಷಿತ್ ರಾಣಾ ಉತ್ತಮ ಉದಾಹರಣೆ. ದುಲೀಪ್ ಟ್ರೋಫಿ ಪಂದ್ಯಾವಳಿಯಲ್ಲಿ ಅವರ ವರ್ತನೆ ಈಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

ಐಪಿಎಲ್ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುವ ವೇಗಿ ಹರ್ಷಿತ್ ರಾಣಾ ಕಳೆದ ಸೀಸನ್ ಲ್ಲಿ ಎದುರಾಳಿ ಆಟಗಾರ ಮಯಾಂಕ್ ಅಗರ್ವಾಲ್ ರನ್ನು ಔಟ್ ಮಾಡಿದ ಬಳಿಕ ಫ್ಲೈಯಿಂಗ್ ಕಿಸ್ ಸೆಲೆಬ್ರೇಷನ್ ಮಾಡಿ ಒಂದು ಪಂದ್ಯಕ್ಕೆ ನಿಷೇಧದ ಶಿಕ್ಷೆಯನ್ನೂ ಅನುಭವಿಸಿದ್ದರು.

ಬಳಿಕ ಆ ಇಡೀ ಸೀಸನ್ ನಲ್ಲಿ ಅವರು ಕೊಂಚ ಸೈಲೆಂಟ್ ಆಗಿದ್ದರು. ಆದರೆ ಇಷ್ಟಾದರೂ ಅವರು ಬುದ್ಧಿ ಕಲಿತುಕೊಳ್ಳಲಿಲ್ಲ ಎನ್ನುವುದು ಈಗ ಸಾಬೀತಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತ ಎ, ಬಿ ಮತ್ತು ಭಾರತ ಸಿ ನಡುವಿನ ಪಂದ್ಯದಲ್ಲಿ ಮತ್ತೆ ಅಂತಹದ್ದೇ ವರ್ತನೆ ತೋರಿದ್ದಾರೆ.

ಭಾರತ ಸಿ ತಂಡದ ನಾಯಕ ಋತುರಾಜ್ ಗಾಯಕ್ ವಾಡ್ ವಿಕೆಟ್ ಪಡೆದ ಹರ್ಷಿತ್ ರಾಣಾ ಮೈದಾನದಲ್ಲಿಯೇ ಫ್ಲೈಯಿಂಗ್ ಕಿಸ್ ಮಾಡಿ ಅವರನ್ನು ಬೀಳ್ಕೊಟ್ಟಿದ್ದಾರೆ. ಅವರ ಈ ವರ್ತನೆ ಈಗ ಮತ್ತೆ ಟೀಕೆಗೆ ಗುರಿಯಾಗಿದೆ. ಯುವ ಆಟಗಾರರು ಮೊದಲು ಶಿಸ್ತು ಕಲಿಯಬೇಕು. ಮೈದಾನದಲ್ಲಿ ಹೇಗೆ ವರ್ತಿಸಬೇಕು ಎಂಬ ಸಭ್ಯತೆಯೇ ಇಲ್ಲದೇ ಇದ್ದರೆ ಇಂತಹ ಆಟಗಾರರು ಯಾವುದೇ ಸಾಧನೆ ಮಾಡಿಯೂ ಪ್ರಯೋಜನವಿಲ್ಲ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments