Webdunia - Bharat's app for daily news and videos

Install App

ಭಾರತ-ಪಾಕಿಸ್ತಾನ ವಿಶ್ವಕಪ್ ನಲ್ಲಿ ಆಡಬೇಕು ಎಂದ ಸಚಿವ

Webdunia
ಸೋಮವಾರ, 4 ಮಾರ್ಚ್ 2019 (09:12 IST)
ಮುಂಬೈ: ಮುಂಬರುವ ಏಕದಿನ ವಿಶ್ವಕಪ್ ನಲ್ಲಿ ಭಾರತ ಪಾಕಿಸ್ತಾನ ವಿರುದ್ಧ ಪಂದ್ಯವಾಡಬೇಕೋ, ಬಹಿಷ್ಕರಿಸಬೇಕೋ ಎಂಬ ಚರ್ಚೆಗಳ ಬೆನ್ನಲ್ಲೇ ಹರ್ಯಾಣದ ಕ್ರೀಡಾ ಸಚಿವ ಅನಿಲ್ ವಿಜ್ ಮಹತ್ವದ ಹೇಳಿಕೆ ನೀಡಿದ್ದಾರೆ.


2019 ರ ವಿಶ್ವಕಪ್ ಕೂಟದಲ್ಲಿ ಭಾರತ ಪಾಕ್ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಬೇಕು ಎಂದು ಹಲವು ಮಾಜಿ ಕ್ರಿಕೆಟಿಗರು, ಅಭಿಮಾನಿಗಳೂ ಒತ್ತಾಯಿಸುತ್ತಿದ್ದರೆ, ಇತ್ತ ಅನಿಲ್ ವಿಜ್ ಭಾರತ ಪಂದ್ಯ ಬಹಿಷ್ಕರಿಸಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಒಂದು ವೇಳೆ ಭಾರತ ಪಂದ್ಯ ಬಹಿಷ್ಕರಿಸಿದರೆ ವೃಥಾ ಪಾಕಿಸ್ತಾನಕ್ಕೆ ನಾವೇ ಮುನ್ನಡೆ ನೀಡಿದಂತಾಗುತ್ತದೆ. ಐಸಿಸಿ ವಿಶ್ವಕಪ್ ಎನ್ನುವುದು ವಿವಿಧ ರಾಷ್ಟ್ರಗಳು ಭಾಗವಹಿಸುವ ಕೂಟ. ಯಾವುದೇ ದೇಶ ಎದುರಾದರೂ ಭಾರತ ಆಡಬೇಕು. ನಾವ್ಯಾಕೆ ಹಿಂದೆ ಸರಿಯಬೇಕು? ಭಾರತ ಈ ಮಹತ್ವದ ಕೂಟದಲ್ಲಿ ಪಾಕ್ ವಿರುದ್ಧ ಆಡಿ ಅವರನ್ನು ಸೋಲಿಸಬೇಕು’ ಎಂದು ಅನಿಲ್ ವಿಜ್ ಹೇಳಿದ್ದಾರೆ.

ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಕೂಡಾ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅವರ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs SRH: ಟಾಸ್ ಗೆದ್ದ ಆರ್‌ಸಿಬಿ, ಗುಜರಾತ್‌ನ್ನು ಹಿಂದಿಕ್ಕುವ ಗುರಿ

ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿರಾಟ್, ರೋಹಿತ್ ಅನುಪಸ್ಥಿತಿ ನಿಭಾಯಿಸುವುದು ದೊಡ್ಡ ಸವಾಲು ಎಂದ ಗಂಭೀರ್‌

India New Test Captain: ಹರಿದಾಡುತ್ತಿರುವ ಹೆಸರುಗಳಲ್ಲಿ ಇವರೇ ನಾಯಕನಾಗುವುದು ಪಕ್ಕಾ ಅಂತೇ

RCB vs SRH match: ಆರ್ ಸಿಬಿಗೆ ಇಂದು ಮರಳಿ ನಂ1 ಪಟ್ಟಕ್ಕೇರುವುದೇ ಗುರಿ

KL Rahul: ಕೆಎಲ್ ರಾಹುಲ್ ವೃತ್ತ ಎಳೆದ ಮೇಲೆಯೇ ಡೆಲ್ಲಿ ಕ್ಯಾಪಿಟಲ್ಸ್ ಗೆ ಈ ಗತಿಯಾಗಿದ್ದು

ಮುಂದಿನ ಸುದ್ದಿ
Show comments