Webdunia - Bharat's app for daily news and videos

Install App

ಬಿಸಿಸಿಐ ಶಿಕ್ಷೆಯಿಂದ ಹಾರ್ದಿಕ್ ಪಾಂಡ್ಯ ತಪ್ಪಿಸಿಕೊಂಡಿದ್ದರ ಹಿಂದಿದೆ ಟ್ವಿಸ್ಟ್

Krishnaveni K
ಶುಕ್ರವಾರ, 1 ಮಾರ್ಚ್ 2024 (11:07 IST)
ಮುಂಬೈ: ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ನಂತೆ ಟೆಸ್ಟ್ ಮಾದರಿ ಕ್ರಿಕೆಟ್ ಆಡದ ಹಾರ್ದಿಕ್ ಪಾಂಡ್ಯ ಬಿಸಿಸಿಐ ಶಿಕ್ಷೆಯಿಂದ ತಪ್ಪಿಸಿಕೊಂಡಿದ್ದು ಹೇಗೆ ಎಂಬ ಪ್ರಶ್ನೆ ಹಿಂದಿನ ಟ್ವಿಸ್ಟ್ ಏನೆಂದು ಈಗ ಬಯಲಾಗಿದೆ.

ಕುಂಟು ನೆಪ ಹೇಳಿ ಟೆಸ್ಟ್ ಮಾದರಿಯ ರಣಜಿ ಟ್ರೋಫಿ ಪಂದ್ಯಗಳಿಂದ ತಪ್ಪಿಸಿಕೊಂಡಿರುವ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಮೇಲೆ ಮುನಿಸಿಕೊಂಡ ಬಿಸಿಸಿಐ ಇಬ್ಬರನ್ನೂ ವಾರ್ಷಿಕ ಗುತ್ತಿಗೆಯಿಂದ ಹೊರ ಹಾಕಿ ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ತಂಡಕ್ಕೆ ಮರಳಬೇಕಾದರೆ ರಣಜಿ ಟ್ರೋಫಿ ಆಡಬೇಕು ಎಂಬ ಸೂಚನೆಯನ್ನು ಇಬ್ಬರೂ ಕಡೆಗಣಿಸಿದ್ದಾರೆ.

ಆದರೆ ಈ ಇಬ್ಬರು ಪ್ರತಿಭಾವಂತರಿಗೆ ಶಿಕ್ಷೆ ನೀಡಿದ ಬಿಸಿಸಿಐ ಹಾರ್ದಿಕ್ ಪಾಂಡ್ಯ ವಿಚಾರದಲ್ಲಿ ಯಾಕೆ ಸುಮ್ಮನಾಗಿದೆ. ಹಾರ್ದಿಕ್ ಗೆ ಬಿಸಿಸಿಐ ಎ ದರ್ಜೆಯ ಗುತ್ತಿಗೆ ನೀಡಿರುವುದನ್ನು ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಪ್ರಶ್ನಿಸಿದ್ದರು. ಹಾರ್ದಿಕ್ ಗೂ ಅದೇ ರೀತಿಯ ಪರಿಗಣನೆ ಮಾಡಬೇಕು ಎಂದಿದ್ದರು.

ಆದರೆ ಹಾರ್ದಿಕ್ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಬಿಸಿಸಿಐ ಜೊತೆ ಅವರು ನಡೆಸಿದ ಮಾತುಕತೆ ಕಾರಣ ಎನ್ನಲಾಗಿದೆ. ಅವಕಾಶ ಸಿಕ್ಕಾಗಲೆಲ್ಲಾ ರೆಡ್ ಬಾಲ್ ಮಾದರಿಯ ದೇಶೀಯ ಕ್ರಿಕೆಟ್ ನಲ್ಲೂ ಆಡುವೆ. ಆದರೆ ಸದ್ಯಕ್ಕೆ ವೈದ್ಯಕೀಯ ಸಲಹೆಯಂತೆ ಸುದೀರ್ಘ ಮಾದರಿಯ ಆಟವಾಡಲು ನನಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯ್ತಿ ನೀಡುವಂತೆ ಹಾರ್ದಿಕ್ ಮನವಿ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ಬಿಸಿಸಿಐ ಹಾರ್ದಿಕ್ ಗೆ ವಿನಾಯ್ತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments